ರವಿಕೃಷ್ಣಾ ರೆಡ್ಡಿ  
ರಾಜ್ಯ

ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

ಜೂನ್ 8ರಂದು ಬಿಡದಿ ಪೊಲೀಸ್ ಠಾಣೆಯಲ್ಲಿ ರಾಜಣ್ಣ ಎಚ್.ಸಿ. ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ತಮ್ಮ ಜಮೀನನ್ನು ನೀಡಲು ಒಪ್ಪಿಕೊಂಡ ರೈತರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜೂನ್ 8ರಂದು ಬಿಡದಿ ಪೊಲೀಸ್ ಠಾಣೆಯಲ್ಲಿ ರಾಜಣ್ಣ ಎಚ್.ಸಿ. ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ದೂರಿನಲ್ಲಿ ರಾಜಣ್ಣ ಅವರು, ಬಿಡದಿ ಟೌನ್‌ಶಿಪ್ ಯೋಜನೆಗಾಗಿ ತಮ್ಮ ಜಮೀನು ಸ್ವಾಧೀನಕ್ಕೆ ನೀಡಲು ಒಪ್ಪಿಕೊಂಡ ರೈತರಲ್ಲಿ ತಾವೂ ಒಬ್ಬರು ಎಂದು ತಿಳಿಸಿದ್ದಾರೆ.

ಜೂನ್ 6ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೈರಮಂಗಲ ಗ್ರಾಮದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ರವಿ ಕೃಷ್ಣಾ ರೆಡ್ಡಿ ಅವಹೇಳನಕಾರಿ ಭಾಷೆ ಬಳಸಿದ್ದಾರೆ ಎನ್ನಲಾಗಿದೆ. ಜಮೀನು ನೀಡಲು ಒಪ್ಪಿದ ರೈತರನ್ನು ಅವರು “ರಾಕೆಟಿಯರ್‌ಗಳು” ಹಾಗೂ “ರಿಯಲ್ ಎಸ್ಟೇಟ್ ಏಜೆಂಟ್‌ಗಳು” ಎಂದು ಕರೆದಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರು ಆರಂಭದಲ್ಲಿ ಈ ಪ್ರಕರಣವನ್ನು ನಾನ್-ಕಾಗ್ನಿಜಬಲ್ ರಿಪೋರ್ಟ್ (NCR) ಆಗಿ ದಾಖಲಿಸಿದ್ದರು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಅದನ್ನು ಎಫ್‌ಐಆರ್ ಆಗಿ ಪರಿವರ್ತಿಸಿದ್ದಾರೆ.

ರವಿ ಕೃಷ್ಣಾ ರೆಡ್ಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 352 ಅಡಿಯಲ್ಲಿ — ಶಾಂತಿ ಭಂಗವಾಗುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು — ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!

US-Iran war: ಅಮೆರಿಕಾ ದಾಳಿಗೆ ಇರಾನ್ ತಿರುಗೇಟು; ಬಹ್ರೇನ್-ಕುವೈತ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ, ಯುದ್ಧ ಪುನರಾರಂಭ..!

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಒಪ್ಪಲು ಸಾಧ್ಯವಿಲ್ಲ, ಸಮುದ್ರ ಮಾರ್ಗಗಳ ಭದ್ರತೆ ಕಾಪಾಡಿ; ವಿಶ್ವಸಂಸ್ಥೆಯಲ್ಲಿ ಭಾರತ ಗುಡುಗು

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಇರಾನ್ ಮೇಲೆ ಮತ್ತೆ ಅಮೆರಿಕಾ ದಾಳಿ; ಟೆಹ್ರಾನ್ ಕಠಿಣ ಕ್ರಮ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್..!

Space X IPO ಬಗ್ಗೆ ನಿಮಗೆ ತಿಳಿದಿರಬೇಕಾದ ಅಂಶಗಳು! (ಹಣಕ್ಲಾಸು)

SCROLL FOR NEXT