ಡಿ.ಕೆ ಶಿವಕುಮಾರ್ 
ರಾಜ್ಯ

ಡಿ.ಕೆ ಶಿವಕುಮಾರ್​​ಗೆ ಗುರುವಿನ ಆಶೀರ್ವಾದವಿದೆ; ಮುಖ್ಯಮಂತ್ರಿಗಳಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ

ಡಿಕೆ ಶಿವಕುಮಾರ್‌ ಗುರುವಿನ ಆಶೀರ್ವಾದ ಪಡೆದಿದ್ದು, ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಗುರುವಿನ ಆಶೀರ್ವಾದ ಅವರಿಗೆ ರಕ್ಷಾಕವಚವಾಗಿದೆ.

ತುಮಕೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಯಾವುದೇ ರೀತಿಯಾದ ಕಂಟಕವಿಲ್ಲ ಎಂದು ನೊಣವಿನಕೆರೆ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭವಿಷ್ಯ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ಪಾದಪೂಜೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸ್ವಾಮೀಜಿ ಈ ಬಗ್ಗೆ ಮಾತನಾಡಿದ್ದಾರೆ. ಸಾಕಷ್ಟು ಪ್ರಯತ್ನದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಇನ್ನು ಮುಂದೆ ಯಾವುದೇ ಕಂಟಕ ಇಲ್ಲ ಎಂದು ತುಮಕೂರಿನ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಅಭಯ ನೀಡಿದ್ದಾರೆ.

ಡಿಕೆ ಶಿವಕುಮಾರ್‌ ಗುರುವಿನ ಆಶೀರ್ವಾದ ಪಡೆದಿದ್ದು, ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಗುರುವಿನ ಆಶೀರ್ವಾದ ಅವರಿಗೆ ರಕ್ಷಾಕವಚವಾಗಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​​​ಗೆ ಈಗ ಯಾವುದೇ ರೀತಿಯ ಕಂಟಕಗಳಿಲ್ಲ, ಅವರು ಸಂಪೂರ್ಣವಾಗಿ ಗುರುವಿನ ಆಶೀರ್ವಾದದ ಅಡಿಯಲ್ಲಿ ಇದ್ದಾರೆ.

ಆದ್ದರಿಂದ ಅವರಿಗೆ ಯಾವುದೇ ತೊಂದರೆ ಬಂದರೂ ಅದು ನಿವಾರಣೆ ಆಗುತ್ತೇ ಎಂಬ ಮಾತುಗಳ ಮೂಲಕ ಅಜ್ಜಯ್ಯ ಡಿಕೆಶಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ರಾಜಕೀಯ ಜೀವನದಲ್ಲಿ ಏರಿಳಿತಗಳು ಸಹಜ, ಆದರೆ ಗುರುವಿನ ಆಶೀರ್ವಾದವಿದ್ದರೆ ಎಲ್ಲ ಅಡೆತಡೆಗಳು ದೂರವಾಗುತ್ತವೆ ಎಂಬ ಸಂದೇಶವನ್ನು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!