ಸಾಂದರ್ಭಿಕ ಚಿತ್ರ 
ರಾಜ್ಯ

ಕಾರವಾರ: ಶಾಲೆ ಆರಂಭವಾಗಿ ಹತ್ತೇ ದಿನದಲ್ಲಿ ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ಈ ಆಘಾತಕರಾಗಿ ಘಟನೆ ನಡೆದಿದ್ದು, 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾರೆ.

ಕಾರವಾರ: ಇತ್ತೀಚಿಗೆ ಅಪ್ರಾಪ್ತ ಬಾಲಕಿಯರು ಅದರಲ್ಲೂ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಗರ್ಭಿಣಿಯಾಗುವುದು ಅಥವಾ ಮಗುವಿಗೆ ಜನ್ಮ ನೀಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕಾರವಾರ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​​​ನಲ್ಲಿ ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ಈ ಆಘಾತಕರಾಗಿ ಘಟನೆ ನಡೆದಿದ್ದು, 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಹಾಸ್ಟೆಲ್ ಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿರುವ ಸುದ್ದಿ ಕೇಳಿ ಪೋಷಕರು ಶಾಕ್​​​ ಆಗಿದ್ದಾರೆ.

ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು, ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್

ರಾಜ್ಯಸಭೆ ನಾಮಪತ್ರ ವಿವಾದ: ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ ಶಾಕ್, ಪರಿಹಾರಕ್ಕಾಗಿ ECI ಮೊರೆ ಹೋಗುವಂತೆ ಸೂಚನೆ..!

ಬೀದರ್‌ನಲ್ಲಿ ಶಾಕಿಂಗ್ ಘಟನೆ: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥ; ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು!

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

"ನಿಮ್ಮ ಶಸ್ತ್ರಾಸ್ತ್ರಗಳು ಭಾರತದ ವಿರುದ್ಧ ಬಳಕೆಯಾಗಿವೆ": ರಷ್ಯಾ ತೈಲ ಖರೀದಿ ಸಮರ್ಥಿಸಿ, ಯುರೋಪ್ ದೇಶಗಳ ದ್ವಿಮುಖ ನೀತಿ ಬೆತ್ತಲು ಮಾಡಿದ ಜೈಶಂಕರ್..! Video

SCROLL FOR NEXT