ಅಧಿಕಾರಿಗೆ ರೈತನಿಂದ ಚಪ್ಪಲಿ ಏಟು online desk
ರಾಜ್ಯ

ಭೂ ಪರಿಹಾರ ಕೊಡದೇ ಸತಾಯಿಸುತ್ತಿದ್ದ ಬಿಟಿಡಿಎ ಸಿಬ್ಬಂದಿ: ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ! Video

ಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲೇ ಈ ಹೈಡ್ರಾಮಾ ನಡೆದಿದೆ.

ಬಾಗಲಕೋಟೆ: ಮುಳುಗಡೆ ಭೂಮಿಗೆ ಹಲವು ವರ್ಷಗಳಿಂದ ಪರಿಹಾರ ಕೊಡದೇ ಆಟಾಡಿಸುತ್ತಿದ್ದ ಅಧಿಕಾರಿಗಳ ವರ್ತನೆಗೆ ಬೇಸರಗೊಂಡ ಬಾಗಲಕೋಟೆ ರೈತರೊಬ್ಬರು ಅಧಿಕಾರಿಗೆ ಚಪ್ಪಲಿಯಲ್ಲಿ ಥಳಿಸಿ ಆಕ್ರೋಶ ಹೊರಹಾಕಿದ್ದಾರೆ.

ಬಾಗಲಕೋಟೆ ನಗರವನ್ನು ಸಂಪರ್ಕಿಸುವ ರಸ್ತೆ ಯೋಜನೆಗಾಗಿ 2004 ರಲ್ಲಿ ದಾದೇನವರ್ ವೃತ್ತದ ಬಳಿ ಇದ್ದ ರೈತ ಬಸವರಾಜ ದೊಡ್ಡಮನಿ ಎಂಬುವವರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಇದಕ್ಕೆ ಪರಿಹಾರ ಕೊಡುವುದರಲ್ಲಿನ ವಿಳಂಬ ಮತ್ತು ಅಸಮರ್ಪಕ ಪರಿಹಾರದ ಬಗ್ಗೆ ರೈತ ದೊಡ್ಡಮನಿ ಅಸಮಾಧಾನಗೊಂಡಿದ್ದರು.

ಇಂದು ಕಚೇರಿಯ ಕಾರ್ಯಕಲಾಪಗಳ ವೇಳೆ, ಬಸವರಾಜ ದೊಡ್ಡಮನಿ ಅವರು ಬಿಟಿಡಿಎ ಕೇಸ್ ವರ್ಕರ್ ಅಂಕಡ್ ಅವರಿಗೆ ಚಪ್ಪಲಿಯಿಂದ ಹೊಡೆದರು, ಇದರಿಂದಾಗಿ ಕಚೇರಿ ಆವರಣದಲ್ಲಿ ಗದ್ದಲ ಉಂಟಾಯಿತು ಮತ್ತು ಸಭೆಗೆ ಸ್ವಲ್ಪ ಸಮಯ ಅಡ್ಡಿಯಾಯಿತು.

ಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲೇ ಈ ಹೈಡ್ರಾಮಾ ನಡೆದಿದೆ.

ಕಳೆದ ಒಂದು ವರ್ಷದಿಂದ 15 ಜನ ಸಫಾಯಿ ಕರ್ಮಚಾರಿಗಳಿಗೆ ಸೈಟ್ ಮಂಜೂರು ಮಾಡಿಲ್ಲ ಎಂದು ಆಗ್ರಹಿಸಿ ಡಿಎಸ್‌ಎಸ್‌ (DSS) ಹೋರಾಟಗಾರರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಈ ಮುತ್ತಿಗೆಯ ವೇಳೆ ಕಚೇರಿಗೆ ಆಗಮಿಸಿದ ರೈತ ಬಸಪ್ಪ ದೊಡಮನಿ ಎಂಬುವವರು ಡಿಎಸ್‌ಎಸ್‌ ಮುಖಂಡರ ಎದುರೇ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ನನ್ನ ಭೂಮಿ ಮುಳುಗಡೆಯಾಗಿ ನಾಲ್ಕು ವರ್ಷಗಳೇ ಕಳೆದರೂ ಬಿಟಿಡಿಎ ಅಧಿಕಾರಿಗಳು ಇನ್ನುವರೆಗೆ ನನಗೆ ಭೂ ಪರಿಹಾರ ನೀಡಿಲ್ಲ. ಪರಿಹಾರಕ್ಕಾಗಿ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ದೊಡಮನಿ ಆಕ್ರೋಶ ಹೊರಹಾಕುತ್ತಿದ್ದಂತೆ, ಅಲ್ಲಿಯೇ ಇದ್ದ ಬಿಟಿಡಿಎ ಹಿರಿಯ ಸಹಾಯಕ ಹಾಗೂ ಟೈಪಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ನೀಲಕಂಠ ಅಂಕದ್ ಮತ್ತು ರೈತನ ಮಧ್ಯೆ ತೀವ್ರ ವಾಗ್ವಾದ ಏರ್ಪಟ್ಟಿದೆ. ಮಾತು ಬೆಳೆಯುತ್ತಿದ್ದಂತೆ ತೀವ್ರ ಕೋಪಗೊಂಡ ರೈತ ಬಸಪ್ಪ, ತಕ್ಷಣವೇ ತಮ್ಮ ಚಪ್ಪಲಿಯನ್ನು ತೆಗೆದುಕೊಂಡು ಟೈಪಿಸ್ಟ್ ನೀಲಕಂಠ ಅವರಿಗೆ ಎಲ್ಲರ ಎದುರೇ ಹೊಡೆದು ಆಕ್ರೋಶ ತೀರಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂನಲ್ಲಿ AN-32 ಸಾರಿಗೆ ವಿಮಾನ ಪತನ: ಐವರು IAF ಸಿಬ್ಬಂದಿ ಸಾವು; ತನಿಖೆಗೆ ಆದೇಶ

ಪ್ರಧಾನಿ ಮೋದಿ 'ಅಘೋರಿ', ಔರಂಗಜೇಬನ ನಾಡಿನಿಂದ ಬಂದವರು: ಸಂಜಯ್ ರಾವತ್

ಮೋದಿಯನ್ನು ಅಪ್ಪಿಕೊಂಡಾಗಲೇ.. ರಾಹುಲ್ ಗಾಂಧಿಯಿಂದಲೇ INDIA ದುರ್ಬಲ, BJPಗೆ ನೆರವು: Pinarayi Vijayan ಸ್ಫೋಟಕ ಹೇಳಿಕೆ

ಧಾರವಾಡ: love Jihad ಗೆ ಹೆದರಿ ದಲಿತ ಬಾಲಕಿ ಆತ್ಮಹತ್ಯೆ; ರಾಜಿ ಸಂಧಾನಕ್ಕೆ ಯತ್ನ, ಗರಗ CPI ಅಮಾನತು

ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಮಳೆಯಿಂದಾಗಿ 25 ಓವರ್ ಗೆ ಸೀಮಿತ! ಇಬ್ಬರ ಪದಾರ್ಪಣೆ

SCROLL FOR NEXT