ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆಗೆ ಪ್ರಧಾನಿ ಮೋದಿಯೇ ಬೆಂಬಲ ಸೂಚಿಸಿದ್ದಾರೆ; HDK ಮಾರ್ಗದರ್ಶನ ನಮಗೆ ಬೇಕು: CM ಡಿ.ಕೆ ಶಿವಕುಮಾರ್

ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಬೆಂಗಳೂರು: ಮಹಾನಗರ ಬೆಂಗಳೂರು ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಉಪನಗರಗಳ (Township) ನಿರ್ಮಾಣದ ತಮ್ಮ ಪರಿಕಲ್ಪನೆಯನ್ನು ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಹೆಚ್​​ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ನಾವು ಈ ಯೋಜನೆ ಮುಂದುವರೆಸುತ್ತಿದ್ದೇವೆ ಎಂದು ಹೇಳಿದರು.

ಮೊನ್ನೆ ದೆಹಲಿಯಲ್ಲಿ ನೀತಿ ಆಯೋಗದ ಸಭೆ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ದೆಹಲಿಯಿಂದ ಹಿಂದಿರುಗಿದ ಡಿ.ಕೆ ಶಿವಕುಮಾರ್, ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಅವರಿಗೆ (ಜೆಡಿಎಸ್ ಮತ್ತು ಹೆಚ್ ಡಿಕೆಗೆ) ಶುಭವಾಗಲಿ ಎಂದು ಹಾರೈಸುತ್ತೇನೆ. ಈ ಹಿಂದೆ ಕುಮಾರಸ್ವಾಮಿ ಆರಂಭಿಸಿದ್ದ ಟೌನ್‌ಶಿಪ್‌ಗಳನ್ನು ನಾವು ಈಗ ಜಾರಿಗೆ ತರುತ್ತಿದ್ದೇವೆ. ನಿನ್ನೆ ನಾನು ಪ್ರಧಾನಮಂತ್ರಿಯನ್ನು ಭೇಟಿಯಾದಾಗ, ತಾವು ಸ್ವತಃ 7 ರಿಂದ 8 ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಿದ್ದೇನೆ ಎಂದು ಹೇಳಿದರು. ಜೊತೆಗೆ, 'ಡಿಕೆ, ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗಬೇಕು' ಎಂದು ನನಗೆ ಹೇಳಿದರು. ಅವರು ನೀಡಿದ ಆ ಸಲಹೆಯನ್ನು ಗಮನದಲ್ಲಿಟ್ಟುಕೊಂಡೇ ನಾವು ಮುಂದುವರಿಯುತ್ತಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಡಿ ಕೆ ಶಿವಕುಮಾರ್ ಅವರ ಪೂರ್ವಾಧಿಕಾರಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಈ ಹಿಂದೆ ನೀತಿ ಆಯೋಗದ ಸಭೆಗಳಿಗೆ ಗೈರಾಗುತ್ತಿದ್ದರು.

ನಿಮ್ಮೆಲ್ಲರ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ನಾನು ಸಭೆಯಲ್ಲಿ ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡೆ. ನನ್ನ ಅಭಿಪ್ರಾಯವನ್ನು ನಾನು ಮಂಡಿಸಿದ್ದೇನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಸಭೆಯಲ್ಲಿ ಹಾಜರಿದ್ದ ಇತರ ರಾಜ್ಯಗಳ ಸಚಿವರನ್ನು ನೀವು ಕೇಳಬಹುದು, ಅಥವಾ ನಮ್ಮನ್ನು ಟೀಕಿಸುವವರನ್ನೂ ಕೇಳಬಹುದು. ಪ್ರಧಾನಮಂತ್ರಿ ನನ್ನ ಆಲೋಚನೆಗಳನ್ನು ಹೇಗೆ ಸ್ವೀಕರಿಸಿದರು, ಅವರು ಯಾವ ಉದಾಹರಣೆಗಳನ್ನು ನೀಡಿದರು ಮತ್ತು ನಾನು ಹೇಳಿದ್ದಕ್ಕೆ ಹೇಗೆ ಒಪ್ಪಿಗೆ ಸೂಚಿಸಿದರು ಎಂಬುದನ್ನು ಅವರು ನಿಮಗೆ ಹೇಳುತ್ತಾರೆ ಎಂದರು.

ಸಭೆಯಲ್ಲಿ ಕರ್ನಾಟಕದ ಜನರು ಐದು ಗ್ಯಾರಂಟಿಗಳಿಂದ ಸಮೃದ್ಧರಾಗಿದ್ದಾರೆ ಎಂದು ತಾವು ಹೇಳಿರುವುದನ್ನೂ ಅವರು ಒಪ್ಪಿಕೊಂಡರು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದವರೇ ಈಗ ಅವುಗಳನ್ನು ದೇಶಾದ್ಯಂತ ಅನುಕರಿಸಿದ್ದಾರೆ ಎಂದು ಅವರು ಹೇಳಿದರು. ಇದರಿಂದ ಕರ್ನಾಟಕಕ್ಕೆ ಹೆಮ್ಮೆ ಉಂಟಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ. ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ

ಕಾವೇರಿ ಜಲ ವಿವಾದ: ತಮಿಳುನಾಡು CM Vijay ಭೇಟಿಗೆ ಬ್ರೇಕ್! ಎಲ್ಲ ಅಂಕಿ-ಅಂಶ ನ್ಯಾಯಾಲಯದಲ್ಲಿದೆ, ಮೇಲ್ಮನವಿ ಸಲ್ಲಿಸಿದ್ದೇವೆ; Video

ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲಾ ಕಾನೂನು ಹೋರಾಟ ನಡೆಸಿದ್ದೇವೆ'; CM ಮನವಿ; Video

CJP ಪ್ರತಿಭಟನಾಕಾರರಿಗೆ AAP ಬೆಂಬಲ; 'ಬಲಪಂಥೀಯ ಗೂಂಡಾಗಳಿಂದ' ರಕ್ಷಣೆ ನೀಡುವ ಭರವಸೆ!

19 ವರ್ಷಗಳ ಬಳಿಕ ಕೋಲ್ಕತ್ತಾಗೆ ಲೇಖಕಿ Taslima Nasrin ಎಂಟ್ರಿ!; ಬಾಂಗ್ಲಾ ತೊರೆಯಲು ಕಾರಣವಾಗಿದ್ದ 'ಲಜ್ಜಾ', Video