ಪ್ರೊ.ಕೆಎಸ್ ಭಗವಾನ್ ಮತ್ತು ಉಗ್ರಪ್ಪ 
ರಾಜ್ಯ

ವಿವಾದಾತ್ಮಕ ಹೇಳಿಕೆ 'ತಿಕ್ಕಲುತನ': ಭಗವಾನ್ ವಿರುದ್ಧ ಕೇಸ್ ದಾಖಲು; ಉಗ್ರಪ್ಪ ಕೂಡ ಕೆಂಡಾಮಂಡಲ!

ಹರಿಹರದ ‘ಪ್ರೊ. ಬಿ. ಕೃಷ್ಣಪ್ಪ ಮೈತ್ರಿವನ’ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್, ಶ್ರೀರಾಮನ ಜನನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ದಾವಣಗೆರೆ: ಶ್ರೀರಾಮ ಜನ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿವಾದಾತ್ಮಕ ಪ್ರೊ. ಕೆಎಸ್ ಭಗವಾನ್ (KS Bhagavan)​​ ವಿರುದ್ಧ ದಾವಣಗೆರೆ (davanagere) ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲಗಳ ಪ್ರಕಾರ ಇದೇ ಜೂನ್ 9 ರಂದು ಹರಿಹರದ ‘ಪ್ರೊ. ಬಿ. ಕೃಷ್ಣಪ್ಪ ಮೈತ್ರಿವನ’ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್, ಶ್ರೀರಾಮನ ಜನನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು.

“ನೀವು ಪೂಜೆ ಮಾಡುವ ಶ್ರೀರಾಮ ತನ್ನ ತಂದೆಗೆ ಹುಟ್ಟಿದವನಲ್ಲ. ರಾಜ ದಶರಥ ಪುತ್ರಕಾಮೇಷ್ಟಿ ಯಾಗ ಮಾಡಿದಾಗ, ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕಿತ್ತು. ರಾಣಿ ಪುರೋಹಿತರೊಂದಿಗೆ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ, ನಿಮ್ಮ ದೇವರು ಅಪ್ಪನಿಗೆ ಹುಟ್ಟಿದ ಮಗ ಅಲ್ಲ”. ಹೀಗೆ ವಿವಾದಾತ್ಮಕವಾಗಿ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ದೂರು ದಾಖಲು

ಇದೇ ಹೇಳಿಕೆ ಹಿಂದೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಆರೋಪಿಸಿ, ಹಿಂದೂ ಜಾಗರಣ ವೇದಿಕೆಯ ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ದೂರು ನೀಡಿದ್ದಾರೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಸದ್ಯ ಹರಿಹರ ಗ್ರಾಮಾಂತರ ಪೊಲೀಸರು ಪ್ರೊ. ಕೆ.ಎಸ್. ಭಗವಾನ್​ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲಂ 196(1)(a) ಮತ್ತು 299ರ ಅನ್ವಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮಾಜಿ ಸಂಸದ ವಿಎಸ್ ಉಗ್ರಪ್ಪ ಕೂಡ ಕೆಂಡಾಮಂಡಲ

ಇನ್ನು ಈ ವಿಚಾರವಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಕೆಂಡಾಮಂಡಲರಾಗಿದ್ದು, ಬಾಗಲಕೋಟೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಭಗವಾನ್ ವಯಸ್ಸಿನ ಕಾರಣ‌ವೊ, ತಿಕ್ಕಲುತನವೊ ಗೊತ್ತಿಲ್ಲ. ಏನೇನೋ ಬಾಯಿಗೆ ಬಂದ ಹಾಗೆ ಮಾತನಾಡುತ್ತಾನೆ. ಅವರನ್ನು ನಾನು ಅನೇಕ ಸಾರಿ ಇಗ್ನೋರ್‌ ಮಾಡಬೇಕು ಅಂತಿದ್ದೆ. ಆದರೆ ಮಹರ್ಷಿ ವಾಲ್ಮೀಕಿ ರಾಮಾಯಣ ಬಗ್ಗೆ ಕೆಟ್ಟ ರೀತಿ ಮಾತಾಡಿದ್ದಾನೆ. ಇವರಿಗೆ ರಾಮಾಯಣದ ಬಗ್ಗೆ ಅರಿವು ಇಲ್ಲ. ಭಗವಾನ್ ಅಂತ‌ ಹೆಸರು ಇಟ್ಟುಕೊಂಡು ಮನಸೋ ಇಚ್ಛೆ ಮಾತಾಡುತ್ತಾನೆ ಎಂದು ವಾಗ್ದಾಳಿ ಮಾಡಿದ್ದಾರೆ.

ಗಾಂಧೀಜಿ ಬಯಸಿದ್ದು ಗಾಂಧಿ ರಾಜ್ಯವಲ್ಲ, ರಾಮರಾಜ್ಯ. ಗಾಂಧಿಗಿಂತ ದೊಡ್ಡ ಮನುಷ್ಯನಾ ನೀನು? ಸೋ ಕಾಲ್ಡ್ ಇಂಟಲೆಕ್ಚುವಲ್ ಅಂತ ತೋರಿಸಿಕೊಳ್ಳುತ್ತಿರುವ ಭಗವಾನ್ ಈ ರೀತಿ ಮಾತಾಡಬಾರದು. ವಾಲ್ಮೀಕಿ‌ ಸಮಾಜದ‌ ಮೇಲೆ ಸಿಟ್ಟಿದ್ದರೆ ಈ‌ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ. ನಮ ಭಾವನೆಗೆ ಧಕ್ಕೆ ಮಾಡಿದ್ದೀರಿ ಈ ದೇಶದ ಜನರ ಬಳಿ ಕ್ಷಮೆ‌ ಕೇಳಬೇಕು ಎಂದು ಉಗ್ರಪ್ಪ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ