ಮೂವರು ನೀರುಪಾಲು 
ರಾಜ್ಯ

ಹಾಸನ: ಸ್ನೇಹಿತರ ಕಣ್ಣೆದುರೇ ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರ ನೀರುಪಾಲು!

ಬೆಂಗಳೂರು ಮೂಲದ ಯುವಕರ ತಂಡವೊಂದು ಧರ್ಮಸ್ಥಳ ಪ್ರವಾಸಕ್ಕೆ ತೆರಳಿದ್ದು ವಾಪಸ್ಸಾಗುತ್ತಿದ್ದಾಗ ಈಜಾಡಲು ಹಾಸನದ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದ ಹಿನ್ನೀರಿಗೆ ಇಳಿದಿದ್ದಾಗ ಮೂವರು ಯುವಕರು ನೀರುಪಾಲಾಗಿದ್ದಾರೆ.

ಹಾಸನ: ಬೆಂಗಳೂರು ಮೂಲದ ಯುವಕರ ತಂಡವೊಂದು ಧರ್ಮಸ್ಥಳ ಪ್ರವಾಸಕ್ಕೆ ತೆರಳಿದ್ದು ವಾಪಸ್ಸಾಗುತ್ತಿದ್ದಾಗ ಈಜಾಡಲು ಹಾಸನದ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದ ಹಿನ್ನೀರಿಗೆ ಇಳಿದಿದ್ದಾಗ ಮೂವರು ಯುವಕರು ನೀರುಪಾಲಾಗಿದ್ದಾರೆ. ಇನ್ನು ಕಣ್ಣೇದುರೇ ಸ್ನೇಹಿತರು ಮುಳುಗುತ್ತಿದ್ದರೂ ಏನು ಮಾಡಲು ಸಾಧ್ಯವಾಗದೇ ಯುವಕರ ತಂಡ ಅಸಹಾಯಕನಾಗಿ ನೋಡುತ್ತ ನಿಂತಿದ್ದರು.

ಈಜು ಬಾರದಿದ್ದರೂ ಯುವಕರು ಜಲಾಶಯಕ್ಕೆ ಇಳಿದ್ದರಿಂದ ಈ ದುರಂತ ಸಂಭವಿಸಿದೆ. ಮೃತರನ್ನು 20 ವರ್ಷದ ಮಣಿಕಂಠ, ಚರಣ್, 23 ವರ್ಷದ ಮಿಲನ್ ಎಂದು ತಿಳಿದುಬಂದಿದೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಗೊರೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು ಮೃತದೇಹಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕೋಲಾಹಲ: TMC ಬಂಡಾಯ ಗುಂಪು ಕಾಕೋಲಿ ಘೋಷ್ ನೇತೃತ್ವದಲ್ಲಿ NCP ಜೊತೆ ವಿಲೀನ!

America-Iran ಶಾಂತಿ ಮಾತುಕತೆ ಸಂದರ್ಭದಲ್ಲೇ ದಕ್ಷಿಣ ಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ!

TMC ಬಂಡಾಯ ಬಣದಲ್ಲಿ 20 ಅಲ್ಲ, 22 ಸಂಸದರು: ಮಮತಾ ಬ್ಯಾನರ್ಜಿಗೆ ಮಹಾಘಾತ; LS ಸ್ಪೀಕರ್ ಭೇಟಿಗೂ ಮುನ್ನ ಮಹತ್ವದ ಸಭೆ!

ರಾಜ್ಯಸಭೆಯಲ್ಲಿ 3ನೇ 2ರಷ್ಟು ಬಹುಮತಕ್ಕೆ NDA ಹತ್ತಿರ: TMC ಬಂಡಾಯದ ಹೊರತಾಗಿಯೂ ಲೋಕಸಭೆಯಲ್ಲಿ ಇಲ್ಲ ಸಂಖ್ಯಾ ಬಲ!

Women's T20 World Cup 2026: ವಿಶ್ವಕಪ್ ಇತಿಹಾಸದಲ್ಲಿ ಹರ್ಮನ್ ಪ್ರೀತ್ ಕೌರ್ ಐತಿಹಾಸಿಕ ಸಾಧನೆ, Mithali Raj ದಾಖಲೆ ಧ್ವಂಸ

SCROLL FOR NEXT