ನಿಖಿಲ್ ಕುಮಾರಸ್ವಾಮಿ 
ರಾಜ್ಯ

ಬಿಡದಿ ಟೌನ್‌ಶಿಪ್: ಡಿ.ಕೆ ಶಿವಕುಮಾರ್ ರೈತರ ಮಾತು ಕೇಳುತ್ತಿಲ್ಲ; ರಾಹುಲ್ ಗಾಂಧಿಗೆ ನಿಖಿಲ್ ಪತ್ರ

ಬಡ, ದಲಿತ ಹಾಗೂ ಸಣ್ಣ ರೈತರ ಜಮೀನುಗಳನ್ನು ಬಲವಂತವಾಗಿ ಕಸಿದುಕೊಳ್ಳಲಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ಇದೀಗ ಭಾರೀ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರೈತರ ಅಹವಾಲುಗಳನ್ನು ಆಲಿಸುತ್ತಿಲ್ಲ ಎಂದು ಆರೋಪಿಸಿ ನಿಖಿಲ್ ಕುಮಾರಸ್ವಾಮಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ.

ಬಡ, ದಲಿತ ಹಾಗೂ ಸಣ್ಣ ರೈತರ ಜಮೀನುಗಳನ್ನು ಬಲವಂತವಾಗಿ ಕಸಿದುಕೊಳ್ಳಲಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಗ್ರೇಟ್‌ ನಿಕೋಬಾರ್‌ ಅಭಿವೃದ್ಧಿ ಯೋಜನೆ ವಿರುದ್ದ ‘ಗ್ರೀನ್ ಓವರ್ ಗ್ರೀಡ್’ (ಹಸಿರಿನ ಮೇಲೆ ದುರಾಸೆ) ಎಂದು ದನಿ ಎತ್ತಿರುವ ರಾಹುಲ್ ಅವರು, ಅರಣ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಅವರದ್ದೇ ಪಕ್ಷದ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಉಪನಗರಕ್ಕೆ ಸ್ವಾಧೀನಪಡಿಸಿಕೊಳ್ಳುತ್ತಿದೆ. ಆ ಬಗ್ಗೆಯೂ ತಮ್ಮ ಸರ್ಕಾರದ ಕಿವಿ ಹಿಂಡಿ ಯೋಜನೆ ಕೈ ಬಿಡುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.

ರಾಹುಲ್ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಹಾಗೂ ಪರಿಸರದ ಬಗ್ಗೆ ಕಾಳಜಿ ಇದ್ದರೆ, ಬಿಡದಿ ಉಪನಗರ ಯೋಜನೆ ಕೈ ಬಿಡುವಂತೆ ತಮ್ಮ ಖಾಸಾ ವ್ಯಕ್ತಿಯಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಿವಿಮಾತು ಹೇಳಬೇಕು. ಸಾಧ್ಯವಾದರೆ ಒಮ್ಮೆ ಬಿಡದಿಗೆ ಭೇಟಿ ನೀಡಿ, ಇಲ್ಲಿರುವುದು ಬರಡು ಭೂಮಿಯೊ ಅಥವಾ ಫಲವತ್ತಾದ ಭೂಮಿಯೊ ಎಂದು ಪರಿಶೀಲಿಸಬೇಕು’ ಎಂದಿದ್ದಾರೆ.

‘ತಮ್ಮ ಕ್ಷೇತ್ರದ ಜನರಿಗೆ ಯಾರೂ ತಮ್ಮ ಜಮೀನು ಮಾರಾಟ ಮಾಡಬೇಡಿ, ನಿಮ್ಮ ಭೂಮಿಗೆ ಚಿನ್ನದ ಬೆಲೆ ತಂದು ಕೊಡುವೆ ಎನ್ನುವ ಮೂಲಕ ಡಿ.ಕೆ. ಶಿವಕುಮಾರ್ ಅವರು, ರಾಮನಗರ ಮತ್ತು ಹಾರೋಹಳ್ಳಿ ತಾಲ್ಲೂಕು ಜನರ ವಿಷಯದಲ್ಲಿ ಯಾಕೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಇಲ್ಲಿರುವವರು ರೈತರಲ್ಲವೆ? ಅವರ ಕ್ಷೇತ್ರದವರು ಮಾತ್ರ ರೈತರೇ?’ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖೈಬರ್ ಪಖ್ತುಂಖ್ವಾದಲ್ಲಿ "ಶಾಂತಿ ರ‍್ಯಾಲಿ"ಯ ಸಮಯದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

Spider-Man: ‘ಸ್ಪಾಯ್ಲರ್‌’ ಕೊಟ್ಟಿದ್ದಕ್ಕೆ ಥಿಯೇಟರ್‌ನಲ್ಲೇ ಹೊಡೆದಾಟ! ಸಿನಿಮಾ ನೋಡೋಕೆ ಹೋದವರ ಹೈಡ್ರಾಮಾ, Video