ರಾಜ್ಯ

ದಾವಣಗೆರೆಯಲ್ಲಿ 18 ಸಿಲಿಂಡರ್‌ ಸ್ಫೋಟ: ಇಬ್ಬರಿಗೆ ಗಾಯ, ಅನಿಲ್ ಎಂಬಾತನ ಸ್ಥಿತಿ ಚಿಂತಾಜನಕ!

ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ.

ದಾವಣಗೆರೆ: ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಅನಿಲ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದರ ನಂತರ ಒಂದರಂತೆ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ.

ಸ್ಫೋಟದ ರಭಸಕ್ಕೆ ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ್ದವು. ದೊಗ್ಗಳ್ಳಿ ಶಿವಕುಮಾ‌ರ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಸಿಲಿಂಡರ್ ಸಂಗ್ರಹಿಸಿ ವಿತರಿಸುತ್ತಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಎಸ್ ಪಿ ಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ