ರಾಜ್ಯ

ದಾವಣಗೆರೆಯಲ್ಲಿ 18 ಸಿಲಿಂಡರ್‌ಗಳ ಸ್ಫೋಟ: ಇಬ್ಬರಿಗೆ ಗಾಯ, ಅನಿಲ್ ಎಂಬಾತನ ಸ್ಥಿತಿ ಚಿಂತಾಜನಕ!

ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ.

ದಾವಣಗೆರೆ: ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಅನಿಲ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದರ ನಂತರ ಒಂದರಂತೆ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ.

ಸ್ಫೋಟದ ರಭಸಕ್ಕೆ ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ್ದವು. ದೊಗ್ಗಳ್ಳಿ ಶಿವಕುಮಾ‌ರ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಸಿಲಿಂಡರ್ ಸಂಗ್ರಹಿಸಿ ವಿತರಿಸುತ್ತಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಎಸ್ ಪಿ ಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

RSS ನೋಂದಣಿ ಮಾಡಿಸಿ ಎಂಬ ಖರ್ಗೆ ಆಗ್ರಹಕ್ಕೆ ಮೋಹನ್ ಭಾಗ್ವತ್ ಪ್ರತಿಕ್ರಿಯೆ: ಇಲ್ಲಿದೆ ವಿವರ...

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು; 'ಜಗಳ' Video ವೈರಲ್; ಅಸಲಿಯತ್ತೇನು?

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ತೈಲ ಬೆಲೆ ಕುಸಿತ, ಹೂಡಿಕೆದಾರರ ಭಾವನೆ ಸಕಾರಾತ್ಮಕ; ಪುಟಿದೆದ್ದ ಷೇರು ಮಾರುಕಟ್ಟೆ

ಕುಟುಂಬ ಸದಸ್ಯರಿಗೆ ಮಟ್ಟಣ್ಣನವರ್ ಬೆದರಿಕೆ: ಚಿನ್ನಯ್ಯ ಆರೋಪ; ಫೋನ್ ಕರೆ ದಾಖಲೆ ಬಿಡುಗಡೆ ಮಾಡಿದ ಮಾಜಿ ಪೊಲೀಸ್ ಅಧಿಕಾರಿ!

SCROLL FOR NEXT