ಜಯೇಂದ್ರ ದಿಗಂಬರ್ ಗಾವ್ಡೆ 
ರಾಜ್ಯ

ಕಾರವಾರ: ಅಧಿಕಾರಿಗಳಿಂದ ಮಿಡ್ ನೈಟ್ ಕಾರ್ಯಾಚರಣೆ; ಜಿಂಕೆ ಬೇಟೆಗೆ ಬಂದಿದ್ದ ಗೋವಾ ಸರ್ಕಾರಿ ನೌಕರನ ಬಂಧನ!

ಅರಣ್ಯ ಅಧಿಕಾರಿಗಳ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಡಿಗ್ಗಿ ಬಳಿಯ ಬೊಂಡೆಲಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಬೇಟೆಯ ಬಗ್ಗೆ ಮಾಹಿತಿ ಬಂದಿದೆ.

ಉತ್ತರ ಕನ್ನಡ: ಕರ್ನಾಟಕ ಮತ್ತು ಗೋವಾ ಗಡಿಯಲ್ಲಿರುವ ಕಾಳಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳು ನಡೆಸಿದ ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ, ಜಿಂಕೆ ಬೇಟೆಗೆ ಬಂದಿದ್ದ ಗೋವಾ ಸರ್ಕಾರಿ ನೌಕರನೊಬ್ಬನನ್ನು ಬಂಧಿಸಲಾಗಿದೆ.

ಗೋವಾದ ಇತರ ಮೂವರು ಮತ್ತು ಅವರಿಗೆ ಸಿವೆಟ್ ಹಾಗೂ ಜಿಂಕೆಗಳನ್ನು ಬೇಟೆಯಾಡಲು ಸಹಾಯ ಮಾಡಿದ ಒಬ್ಬ ಸ್ಥಳೀಯ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಅಧಿಕಾರಿಗಳ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಡಿಗ್ಗಿ ಬಳಿಯ ಬೊಂಡೆಲಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಬೇಟೆಯ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣ ಅರಣ್ಯ ತಂಡವು ಗ್ರಾಮಕ್ಕೆ ಧಾವಿಸಿ ಒಬ್ಬ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯ ಹೇಳಿಕೆ ಪ್ರಕಾರ, ಬೇಟೆಗೆ ಬಳಸಿದ ಬಂದೂಕನ್ನು ಹೊಂದಿದ್ದ ಸುಭಾಷ್ ಮಿರಾಶಿ, ಇತರ ಮೂವರೊಂದಿಗೆ ನಾಪತ್ತೆಯಾಗಿದ್ದಾರೆ.

ಪ್ರಕರಣವನ್ನು ದುರ್ಬಲಗೊಳಿಸಲು ಗೋವಾ ರಾಜ್ಯದಿಂದ ಒತ್ತಡವಿರುವುದರಿಂದ ವನ್ಯಜೀವಿ ಕಾರ್ಯಕರ್ತರು ಇಂದು ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮೂವರು ಆರೋಪಿಗಳಲ್ಲಿ ಇಬ್ಬರು ಖಾಸಗಿ ಭದ್ರತಾ ಸಂಸ್ಥೆ ಸೇರಿದ್ದು, ಒಬ್ಬರು ಗೋವಾ ಸರ್ಕಾರಿ ಉದ್ಯೋಗಿ ಆಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಜಯೇಂದ್ರ ದಿಗಂಬರ್ ಗಾವ್ಡೆ(45) ಗೋವಾ ಸರ್ಕಾರಿ ಸ್ವಾಮ್ಯದ ಕದಂಬ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅರಣ್ಯಾಧಿಕಾರಿಗಳು ಸಿವೆಟ್‌ನ ಮೃತದೇಹವನ್ನು ವಶಪಡಿಸಿಕೊಂಡಿದ್ದು, ಗುಂಡೇಟಿನ ಗಾಯಗಳಿವೆ ಎಂದು ಹೇಳಿದ್ದಾರೆ. ವಶಪಡಿಸಿಕೊಂಡ ಮಾಂಸವನ್ನು ಪರೀಕ್ಷೆಗೆ ಕಳುಹಿಸಲಾಗಿದೆ, ಅದು ಜಿಂಕೆ ಅಥವಾ ಬಾರ್ಕಿಂಗ್ ಜಿಂಕೆಯದ್ದಾಗಿರಬಹುದು ಎನ್ನಲಾಗಿದೆ.

ಬೊಂಡೆಲಿ ಗ್ರಾಮವು ಗಡಿಯ ಸಮೀಪದಲ್ಲಿರುವುದರಿಂದ ಗೋವಾದೊಂದಿಗೆ ಸಂಪರ್ಕ ಹೊಂದಿದೆ. ಇದು 60 ಮನೆಗಳನ್ನು ಹೊಂದಿದೆ. ಪರಾರಿಯಾಗಿರುವ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ

ಅಭಿಷೇಕ್ ಬ್ಯಾನರ್ಜಿಗೆ ಕೇವಲ 2 ಗಂಟೆಗಳ ನೋಟಿಸ್ ನೀಡಿದ ಸ್ಪೀಕರ್! ಇಲ್ಲಿದೆ ಕಾರಣ

Bidadi Township: ಕೆಲವರ ಮಾತು ಕೇಳಿ ಯೋಜನೆ ಕೈ ಬಿಡಲ್ಲ- ಸಚಿವ ಯತೀಂದ್ರ ಸಿದ್ದರಾಮಯ್ಯ!

ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆ ಕ್ರಾಸ್ ವೋಟಿಂಗ್ ಆತಂಕ; ರೆಸಾರ್ಟ್‌ಗೆ ಶಾಸಕರ ಶಿಫ್ಟ್, ಅಲ್ಲೇ ಸಿಎಲ್‌ಪಿ ಸಭೆ

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ, ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

SCROLL FOR NEXT