ಮಾಜಿ ಸಚಿವ ಪ್ರಭು ಚೌಹಾಣ್ online desk
ರಾಜ್ಯ

ಮಾವಿನ ಹಣ್ಣು ತಿಂದು ಸಹೋದರಿಯರ ಸಾವು ಕೇಸ್: ಕುಟುಂಬದ ಹೆಣ್ಣು ಮಕ್ಕಳನ್ನು ದತ್ತು ಪಡೆದ ಮಾಜಿ ಸಚಿವ ಪ್ರಭು ಚವ್ಹಾಣ್

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಮಾವಿನ ಹಣ್ಣು ತಿಂದು ಸಹೋದರಿಯರು ಸಾವನ್ನಪ್ಪಿದ್ದ ನಂತರ ಕುಟುಂಬ ತೀವ್ರ ಬಡತನದಲ್ಲಿತ್ತು.

ಬೀದರ್: ಮಾವಿನ ಹಣ್ಣು ಸೇವಿಸಿ ಇಬ್ಬರು ಸಹೋದರಿಯರು ಮೃತಪಟ್ಟ ಕುಟುಂಬಕ್ಕೆ ಮಾಜಿ ಸಚಿವ, ಶಾಸಕ ಪ್ರಭು ಚೌಹಾಣ್ ನೆರವಿನ ಹಸ್ತ ಚಾಚಿದ್ದಾರೆ. ಸಹೋದರಿಯರು ಮೃತಪಟ್ಟ ಆ ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಮಾವಿನ ಹಣ್ಣು ತಿಂದು ಸಹೋದರಿಯರು ಸಾವನ್ನಪ್ಪಿದ್ದ ನಂತರ ಕುಟುಂಬ ತೀವ್ರ ಬಡತನದಲ್ಲಿತ್ತು. ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌಹಾಣ್ ಮಾನವೀಯತೆಯ ಆಧಾರದ ಮೇಲೆ ಕುಟುಂಬಕ್ಕೆ ತಕ್ಷಣ ಸ್ಪಂದಿಸಿದ್ದಾರೆ.

ದತ್ತು ಪಡೆದಿರುವ ಮೂವರು ಹೆಣ್ಣು ಮಕ್ಕಳ ಸಂಪೂರ್ಣ ಶಿಕ್ಷಣ, ಪಾಲನೆ-ಪೋಷಣೆ ಹಾಗೂ ಭವಿಷ್ಯದ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ಪ್ರಭು ಚೌಹಾಣ್ ಭರವಸೆ ನೀಡಿದ್ದಾರೆ.

ಶಾಸಕ ಪ್ರಭು ಚೌಹಾಣ್, ಶೆಂಬೆಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ಹಾಗೂ ಅವರ ಮದುವೆಯ ಜವಾಬ್ದಾರಿಯನ್ನು ತಾವೇ ವೈಯಕ್ತಿಕವಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುರಹಂಕಾರ ಬಿಟ್ಟು ಕಾನೂನು ಪಾಲಿಸಿ: ಇಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ಇನ್ನು ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಕೊಡಬಾರ್ದಾ?

Fact Check: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಪ್ರತಿಕ್ರಿಯೆ ವಿಡಿಯೋ ಫೇಕ್; ಗೃಹ ಸಚಿವರಿಂದಲೇ ಫ್ಯಾಕ್ಟ್ ಚೆಕ್

ಇರಾನ್ ಸಂಘರ್ಷ ಅಂತ್ಯ; ಸತತ 3ನೇ ದಿನವೂ Indian Stock Market ಏರಿಕೆ, 24 ಸಾವಿರ ಅಂಕ ಗಡಿಯತ್ತ Nifty50

RSS​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಸಚಿವ ಯತೀಂದ್ರ ಸಿದ್ದರಾಮಯ್ಯ

'ಟಿಎಂಸಿ ಹೋರಾಟದಲ್ಲಿ ನಾವು ಮೂಗು ತೂರಿಸುವುದಿಲ್ಲ- ಬಿಜೆಪಿ

SCROLL FOR NEXT