ಬಿ ಕೆ ಹರಿಪ್ರಸಾದ್  
ರಾಜ್ಯ

ವಿಶ್ವದ ಅತಿದೊಡ್ಡ NGO ಎಂದು ಹೇಳಿಕೊಳ್ಳುವ ಆರ್ ಎಸ್ ಎಸ್ ನ ವಿವರ ನೀಡಲು ನಿಮಗೇನು ಸಮಸ್ಯೆ: ಬಿ ಕೆ ಹರಿಪ್ರಸಾದ್-Video

ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯನಿರ್ವಹಿಸಲು ಬಯಸಿದರೆ ಅದು ನೋಂದಾಯಿತವಾಗಿರಬೇಕು, ಅದರ ಹಣಕಾಸು ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಬಿ ಕೆ ಹರಿಪ್ರಸಾದ್ ಬೆಂಬಲಿಸಿದ್ದಾರೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ನೋಂದಣಿ ಕುರಿತು ಸಂವಿಧಾನದ ಚೌಕಟ್ಟಿನೊಳಗೆ ಪ್ರಶ್ನೆ ಎತ್ತಿದ್ದಾರೆ. ರಾಷ್ಟ್ರಧ್ವಜವಾದ ತ್ರಿವರ್ಣ ಧ್ವಜಕ್ಕೆ ಗೌರವ ತೋರದಿರುವುದು ರಾಷ್ಟ್ರವಿರೋಧಿ ಕೃತ್ಯವಾಗುತ್ತದೆ. ಸಂವಿಧಾನಕ್ಕೆ ಗೌರವ ನೀಡದಿರುವುದೂ ರಾಷ್ಟ್ರವಿರೋಧಿ ಕೃತ್ಯವೇ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆಯ ಸದಸ್ಯರು ಯಾರು ಎಂಬುದರ ಸಂಪೂರ್ಣ ವಿವರವನ್ನು ನೀಡಿ. ನೀವು ಅದನ್ನು ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಕರೆಯುತ್ತೀರಿ; ಹಾಗಾದರೆ ಅದರ ಸದಸ್ಯರು ಯಾರು ಎಂಬುದನ್ನೂ ಬಹಿರಂಗಪಡಿಸಬಾರದೇ? ಈ ಶ್ರೀಮಂತ ಸಂಘಟನೆಗೆ ಹಣ ಎಲ್ಲಿಂದ ಬರುತ್ತದೆ? ಆ ಹಣವನ್ನು ಹೇಗೆ ಬಳಸಲಾಗುತ್ತಿದೆ? ಅದು ಜನಸೇವೆಗೆ ಬಳಸಲಾಗುತ್ತಿದೆಯೇ ಅಥವಾ ನಿಮ್ಮ ಸ್ವಂತ ಲಾಭಕ್ಕಾಗಿ ಬಳಸಲಾಗುತ್ತಿದೆಯೇ? ಈ ಲೆಕ್ಕಪತ್ರಗಳು ಮತ್ತು ವಿವರಗಳನ್ನು ಕೇಳುವುದು ಸಂಪೂರ್ಣವಾಗಿ ಸಂವಿಧಾನದ ವಿಧಿ-ವಿಧಾನಗಳ ವ್ಯಾಪ್ತಿಯಲ್ಲಿದೆ ಎಂದರು.

ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯನಿರ್ವಹಿಸಲು ಬಯಸಿದರೆ ಅದು ನೋಂದಾಯಿತವಾಗಿರಬೇಕು, ಅದರ ಹಣಕಾಸು ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಬಿ ಕೆ ಹರಿಪ್ರಸಾದ್ ಬೆಂಬಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ, ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

'ಆಸ್ತಿ ಘೋಷಿಸಲು ಕುಮಾರಸ್ವಾಮಿ ಸಿದ್ಧವೇ?: ಡಿಕೆ ಶಿವಕುಮಾರ್ ನಿಮ್ಮ ಇಡೀ ಕುಟುಂಬದ ಜಾತಕ ಬಿಚ್ಚಿಡಲಿದ್ದಾರೆ'

15 ಕೋಟಿ ರೂ. ಕೊಟ್ರೆ ದುಬೈ ಶೇಖ್ ಜೊತೆ ಮಲಗಬಹುದು! Influencer ಅಪೂರ್ವ ಮುಖಿಜಾ Video ಮತ್ತೆ ವೈರಲ್! ಏನಿದು ಹೊಸ ವಿವಾದ?

ಸ್ಯಾಂಡಲ್ ವುಡ್ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ!

ಶಕ್ತಿ ಯೋಜನೆಯಡಿ 'ಸ್ಮಾರ್ಟ್ ಕಾರ್ಡ್' ವಿತರಣೆಗೆ ಅಂತಿಮ ಸಿದ್ಧತೆ- ಸಚಿವ ಬೈರತಿ ಸುರೇಶ್

SCROLL FOR NEXT