ಸತೀಶ್ ಜಾರಕಿಹೊಳಿ  
ರಾಜ್ಯ

ಜೂನ್ 20 ರಂದು ಸಚಿವ ಸಂಪುಟ ಸಭೆಯಲ್ಲಿ ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆ: ಸತೀಶ್ ಜಾರಕಿಹೊಳಿ

ಯಾವುದೇ ಯೋಜನೆ ತೆಗೆದುಕೊಳ್ಳುವಾಗ, ಅದು ಸರ್ಕಾರಕ್ಕೆ ಹೊರೆ ಆಗಬಾರದು, ಪಕ್ಷಕ್ಕೂ ಹಾನಿ ಆಗಬಾರದು ಎಂಬುದು ಅವರ ಸ್ಪಷ್ಟ ಅಭಿಪ್ರಾಯ. ಒಂದು ಕಾರ್ಯಕ್ರಮ ಅಥವಾ ಯೋಜನೆ ಪಕ್ಷದ ಹೆಸರಿಗೆ ಡ್ಯಾಮೇಜ್ ಆಗುವಂತೆ ಇರಬಾರದು ಎಂದು ಹೇಳಿದ್ದಾರೆ.

ಬೆಂಗಳೂರು: ಜೂನ್ 20 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಬಿಡದಿ ಟೌನ್ ಶಿಪ್ ಯೋಜನೆ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬಿಡದಿ ಟೌನ್​​ಶಿಪ್​ ಯೋಜನೆಗೆ ರೈತರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಬಿಡದಿ ಟೌನ್‌ಶಿಪ್ ವಿಷಯದಲ್ಲಿ ಅವರು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿರುವಂತೆ ಕಾಣುತ್ತದೆ.

ಬಿಡದಿ ಟೌನ್​ಶಿಪ್ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಪಕ್ಷದ ಭವಿಷ್ಯವು ಸಹ ಅದರ ಮೇಲೆ ನಿರ್ಮಾಣ ಆಗಿದೆ. ಟೌನ್​​ಶಿಪ್ ನಿರ್ಮಾಣ ಸರ್ಕಾರಕ್ಕೆ ಹೊರೆಯಾಗಬಾರದು. ಯಾವುದೋ ಒಂದು ಸ್ಕೀಮ್ ಮಾಡಲು ಹೋಗಿ ಸರ್ಕಾರಕ್ಕೆ ದಕ್ಕೆ ಆಗಬಾರದು. ಅದೇ ಸಮಸ್ಯೆ ಉದ್ಭವ ಆಗಬಾರದು.

ಯಾವುದೇ ಯೋಜನೆ ತೆಗೆದುಕೊಳ್ಳುವಾಗ, ಅದು ಸರ್ಕಾರಕ್ಕೆ ಹೊರೆ ಆಗಬಾರದು, ಪಕ್ಷಕ್ಕೂ ಹಾನಿ ಆಗಬಾರದು ಎಂಬುದು ಅವರ ಸ್ಪಷ್ಟ ಅಭಿಪ್ರಾಯ. ಒಂದು ಕಾರ್ಯಕ್ರಮ ಅಥವಾ ಯೋಜನೆ ಪಕ್ಷದ ಹೆಸರಿಗೆ ಡ್ಯಾಮೇಜ್ ಆಗುವಂತೆ ಇರಬಾರದು ಎಂದು ಹೇಳಿದ್ದಾರೆ.

ಅಸಮಾಧಾನ ಹೆಚ್ಚುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ಅಗತ್ಯ ಎಂದು ಸೂಚಿಸಿದ್ದಾರೆ. ಶನಿವಾರ ನಡೆಯುವ ಕ್ಯಾಬಿನೆಟ್​ನಲ್ಲಿ ಈ ಬಗ್ಗೆ ಚರ್ಚೆ ಆಗಬಹುದು ಎಂದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಯೋಜನೆಯ ಬಗ್ಗೆ ಸತೀಶ್ ಅವರ ನಿಲುವನ್ನು ಸ್ವಾಗತಿಸಿದರು. ಸಂಪುಟದಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ, ಕಡಿಮೆ ಮಾತನಾಡಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮಾತುಗಳನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

'ನನ್ನ ಅಮ್ಮ ಒಂಥರಾ ಗೂಢಚಾರಿ ಇದ್ದಂತೆ; ಅಪ್ಪ CM ಆಗಿದ್ದು ಐತಿಹಾಸಿಕ ಕ್ಷಣ': ಫಸ್ಟ್ ಟೈಮ್ ಮನಬಿಚ್ಚಿ ಮಾತನಾಡಿದ ವಿಜಯ್ ಪುತ್ರ!

ಜೀವನದ ಅತಿ ದುಬಾರಿ ಖರೀದಿಯನ್ನು ಬಹಿರಂಗಪಡಿಸಿದ Madhavan; ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ನಾನು ತುಂಬಾ Insecure ಅಂದಿದ್ದೇಕೆ ನಟ?