ವೇಶ್ಯಾವಾಟಿಕೆ ಜಾಲ (ಸಾಂದರ್ಭಿಕ ಚಿತ್ರ) 
ರಾಜ್ಯ

ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; 4 ಮಹಿಳೆಯರು ಸೇರಿ 6 ಮಂದಿ ಬಂಧನ; ಸ್ಪಾ, ಮಸಾಜ್ ಹೆಸರಿನಲ್ಲೂ ಮಾಂಸದಂಧೆ!

ಕಾರ್ಯಾಚರಣೆಯ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಪ್ರೇರೇಪಿಸುವುದು ಮತ್ತು ಅದಕ್ಕೆ ಸಹಕಾರ ನೀಡುತ್ತಿದ್ದ ಆರೋಪದಡಿ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿನ ಬಾಡಿಗೆ ಮನೆಗಳು ಹಾಗೂ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳವು ಕಾಮಾಕ್ಷಿಪಾಳ್ಯ, ಕೆ.ಆರ್. ಪುರಂ, ಕುಮಾರಸ್ವಾಮಿ ಲೇಔಟ್, ಹೆಣ್ಣೂರು ಹಾಗೂ ವರ್ತೂರು ಪ್ರದೇಶಗಳಲ್ಲಿ ವಿವಿಧ ದಿನಾಂಕಗಳಲ್ಲಿ ನಡೆಸಿದ ದಾಳಿಗಳ ವೇಳೆ ಈ ಬಂಧನಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಕಾರ್ಯಾಚರಣೆಯ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಪ್ರೇರೇಪಿಸುವುದು ಮತ್ತು ಅದಕ್ಕೆ ಸಹಕಾರ ನೀಡುತ್ತಿದ್ದ ಆರೋಪದಡಿ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.

ಸ್ಪಾ, ಮಸಾಜ್ ಹೆಸರಿನಲ್ಲೂ ಮಾಂಸದಂಧೆ

ಇದಲ್ಲದೆ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಏಳು ಮಹಿಳೆಯರನ್ನು ರಕ್ಷಿಸಲಾಗಿದ್ದು, ಅವರಲ್ಲಿ ನಾಲ್ವರು ಇತರ ರಾಜ್ಯಗಳಿಗೆ ಸೇರಿದವರಾಗಿದ್ದು, ಮೂವರು ಸ್ಥಳೀಯ ಮಹಿಳೆಯರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಆರೋಪಿಗಳು ದೂರವಾಣಿ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ಚಟುವಟಿಕೆಗಳನ್ನು ಏರ್ಪಡಿಸುತ್ತಿದ್ದುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಸ್ಪಾದಲ್ಲಿ ದೇಹ ಮಸಾಜ್ ಸೇವೆಯ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದುದಾಗಿಯೂ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ, ಕೆ.ಆರ್. ಪುರಂ, ಕುಮಾರಸ್ವಾಮಿ ಲೇಔಟ್, ಹೆಣ್ಣೂರು ಮತ್ತು ವರ್ತೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಪ್ರಮಾಣವಚನ ಸಮಾರಂಭಕ್ಕೆ ಸಕಲ ಸಿದ್ಧತೆ, 20 ಸಚಿವರ ಪಟ್ಟಿಗೆ ಹೈಕಮಾಂಡ್ ಅಸ್ತು..?

ಪೆರುವಿನಲ್ಲಿ ಭೀಕರ ದುರಂತ: ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿ ಸ್ಫೋಟಗೊಂಡ ವಿಮಾನ, 11 ವಿದೇಶಿ ಪ್ರವಾಸಿಗರು ಸೇರಿ 13 ಮಂದಿ ದುರ್ಮರಣ..!

35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!