ಬಾಲಕನ ಮೇಲೆ ರಾಟ್ ವೀಲರ್ ನಾಯಿ ದಾಳಿ 
ರಾಜ್ಯ

Bengaluru: ಬಾಲಕನ ಮೇಲೆ Rottweiler ನಾಯಿ ದಾಳಿ; ಮಾಲೀಕರ ವಿರುದ್ಧ ಪೊಲೀಸ್ ಕೇಸ್ ದಾಖಲು! Video

ಬೆಂಗಳೂರಿನ ಮಹಾದೇವಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ವಿಡಿಯೋ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಕು ನಾಯಿಗಳ ದಾಳಿ ಪ್ರಕರಣ ಮುಂದುವರೆದಿದ್ದು, ರಸ್ತೆಯಲ್ಲಿ ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕ ಮೇಲೆ ರಾಟ್ ವೀಲರ್ ನಾಯಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಮಹಾದೇವಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ವಿಡಿಯೋ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಮೂಲಗಳ ಪ್ರಕಾರ 12 ವರ್ಷದ ಬಾಲಕ ಜೂನ್ 13ರಂದು ವಸತಿ ಪ್ರದೇಶದ ರಸ್ತೆಯಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ವೇಳೆ ಮನೆಯೊಂದರಿಂದ ದಿಢೀರ್ ಓಡಿ ಬಂದ ರಾಟ್ ವೀಲರ್ ನಾಯಿ ಆತನ ಮೇಲೆ ದಾಳಿ ಮಾಡಿದೆ. ಸೈಕಲ್ ಬರುತ್ತಿದ್ದಂತೆಯೇ ಆತನ ಬೆನ್ನಟ್ಟಿದ ನಾಯಿ ಬಾಲಕನ ಕಾಲಿಗೆ ಕಚ್ಚಿದೆ. ದಾಳಿಯಿಂದ ಬಾಲಕನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲು!

ಇನ್ನು ಈ ಘಟನೆ ಸಂಬಂಧ ನಾಯಿಯ ಮಾಲೀಕರ ನಿರ್ಲಕ್ಷ್ಯದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಾಯಿಯನ್ನು ನಿಯಂತ್ರಣದಲ್ಲಿ ಇಡಲು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಾತ್ರಿಪಡಿಸಲು ವಿಫಲರಾದ ಆರೋಪದಡಿ ನಾಯಿಯ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಪರಿಶೀಲನೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

‘CM ಡಿಕೆ ಶಿವಕುಮಾರ್ ಸೂಚನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ, ಆದ್ರೂ...’: ರಾಜೀನಾಮೆ ಬಗ್ಗೆ ಹೊರಟ್ಟಿ ಹೇಳಿದ್ದೇನು?

Videoದಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ಸರ್ಕಾರಿ ಕೆಲಸಕ್ಕೆ ಗುಡ್​ಬೈ ಹೇಳಿದ ಶಿಕ್ಷಕಿ! ಇಲ್ಲಿದೆ ಅಸಲಿ ಕಾರಣ...

ಹಿರಿಯ ಶಾಸಕ HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

'ಬಿಜೆಪಿಯ ದುರಹಂಕಾರದ ವಿರುದ್ಧ ಜನಾದೇಶ': ತಮ್ಮ ಐತಿಹಾಸಿಕ ಗೆಲುವಿಗೆ ಮೂರು ಕಾರಣ ನೀಡಿದ ಪ್ರಶಾಂತ್ ಕಿಶೋರ್!