ಕಲಬುರಗಿ: ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್ಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
2014ರ ಬ್ಯಾಚ್ ಪಿಎಸ್ಐ ಬಸವರಾಜ ಹೆರೂರ್, ಮಂಗಳವಾರ ತಡರಾತ್ರಿ ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಮಾತನಾಡಿದ್ದರು. ಈ ಸುದ್ದಿಯನ್ನು ಸ್ನೇಹಿತರು ಅವರ ತಂದೆಗೆ ವಿಷಯ ತಿಳಿಸಿದ್ದು, ಅವರ ತಂದೆ ಮನೆಗೆ ಬಂದು ಬಾಗಿಲು ಒಡೆದು ನೋಡಿದಾಗ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪಿಎಸ್ಐ ಈ ದುಡುಕಿನ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಆರ್. ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.