ಪ್ರಕಾಶ್ ರಾಜ್  
ರಾಜ್ಯ

‘ಅವರು ಹೋಮ-ಹವನಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ದುಡ್ಡು ಹಾಕುತ್ತೇನೆ’: ಪ್ರಕಾಶ್ ರಾಜ್

ಈ ವೇಳೆ ಧರ್ಮಸ್ಥಳ, ದೇವರ ಮೇಲೆ ನಂಬಿಕೆ ಕುರಿತು ವಿಷಯ ಪ್ರಸ್ತಾಪವಾಯಿತು. ಆ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ದೇವರನ್ನು ನಂಬೋದಿಲ್ಲ. ನನ್ನ ಪತ್ನಿಗೆ ದೇವರ ಮೇಲೆ ಅಪಾರ ನಂಬಿಕೆಯಿದೆ. ಆದಾಗ್ಯೂ ಕೆಲವೊಮ್ಮೆ ನಾನು ದೇವಸ್ಥಾನಕ್ಕೆ ಹೋಗುತ್ತೇನೆ. ಪತ್ನಿಯ ಕಾರಣಕ್ಕಾಗಿ ಹೋಗುತ್ತೇನೆ ಎಂದರು.

ಬಹುಭಾಷಾ ನಟ ಪ್ರಕಾಶ್ ರಾಜ್ ನಾಸ್ತಿಕರು. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಅವರ ಹೆಸರು ಪ್ರಸ್ತಾಪಿಸಿದ್ದರಿಂದ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಲು ಅವರು ನಿನ್ನೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಧರ್ಮಸ್ಥಳ, ದೇವರ ಮೇಲೆ ನಂಬಿಕೆ ಕುರಿತು ವಿಷಯ ಪ್ರಸ್ತಾಪವಾಯಿತು. ಆ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ದೇವರನ್ನು ನಂಬೋದಿಲ್ಲ. ನನ್ನ ಪತ್ನಿಗೆ ದೇವರ ಮೇಲೆ ಅಪಾರ ನಂಬಿಕೆಯಿದೆ. ಆದಾಗ್ಯೂ ಕೆಲವೊಮ್ಮೆ ನಾನು ದೇವಸ್ಥಾನಕ್ಕೆ ಹೋಗುತ್ತೇನೆ. ಪತ್ನಿಯ ಕಾರಣಕ್ಕಾಗಿ ಹೋಗುತ್ತೇನೆ ಎಂದರು.

ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆ. ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು ರಂಗಭೂಮಿಗೆ, ಫೀಸ್ ಕಟ್ಟಲು ಕಷ್ಟಪಡುವವರಿಗೆ ನೀಡುತ್ತೇನೆ. ಇದು ನನ್ನ ಮನಸ್ಸಿಗೆ ನೆಮ್ಮದಿ ಕೊಡುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯ ಸಂಘರ್ಷ ಕೊನೆಗೂ ಅಂತ್ಯ: Pak ಮಧ್ಯಸ್ಥಿಕೆಯಲ್ಲಿ US-Iran ನಡುವೆ ಶಾಂತಿ ಒಪ್ಪಂದ; ನೌಕಾ ದಿಗ್ಬಂಧನ ತೆರವು, ತಕ್ಷಣದಿಂದಲೇ Hormuz ಜಲಸಂಧಿ ಓಪನ್‌..!

ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಪೈಪೋಟಿ -ಅಡ್ಡ ಮತದಾನದ ಭೀತಿ! 7ನೇ ಸ್ಥಾನ ಗೆಲ್ಲೋರು ಯಾರು?

ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ Power game: ವೈಯಕ್ತಿಕ ಪ್ರತಿನಿಧಿಯಾಗಿ ಜೋಬಿನ್ ಜೋಸೆಫ್ ನೇಮಕ, ಹಿಂದಿನ ರಾಜಕೀಯ ಲೆಕ್ಕಾಚಾರವೇನು..?

ಗೃಹಲಕ್ಷ್ಮಿ ದುರುಪಯೋಗಕ್ಕೆ ಬ್ರೇಕ್; ಅರ್ಜಿ ನಮೂನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ, Voter ID, Aadhaar-Link ಮಾಹಿತಿ ಕಡ್ಡಾಯ ಸಾಧ್ಯತೆ..!

SCROLL FOR NEXT