ರಮೇಶ್ ಜಿಗಜಿಣಗಿ, ಪ್ರಿಯಾಂಕ್ ಖರ್ಗೆ ಸಾಂದರ್ಭಿಕ ಚಿತ್ರ 
ರಾಜ್ಯ

'ನಮ್ಮದು ಅಂಬೇಡ್ಕರ್ ರಕ್ತ; ಭಯಪಡುವ ಜಾಯಮಾನ ನನ್ನದಲ್ಲ, ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

ನಾನು ಬಾಬಾ ಸಾಹೇಬರ ಸಿದ್ಧಾಂತದವನು. ಪ್ರಶ್ನಿಸುವ ಧೈರ್ಯ ಮತ್ತು ವೈಚಾರಿಕತೆ ಅವರಿಂದಲೇ ಬಂದಿರುವುದು. ಬಾಬಾ ಸಾಹೇಬರನ್ನು ನಂಬಿದವರಿಗೆ ಭಯ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ದಲಿತ ವ್ಯಕ್ತಿಗೆ ಆರ್ ಎಸ್ ಎಸ್ ಉಸಾಬರಿ ಯಾಕೆ? ಆರ್ ಎಸ್ ಎಸ್ ತಂಟೆಗೆ ಬಂದವರು ಉಳಿದಿಲ್ಲ ಎಂಬ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಯಾಗಿ ಯಾರಿಗೂ ಭಯಪಡುವುದಿಲ್ಲ ಎಂದಿದ್ದಾರೆ.

ರಮೇಶ್ ಜಿಗಜಿಣಗಿ ಕುರಿತ ಹೇಳಿಕೆ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಉತ್ತರಿಸಿರುವ ಪ್ರಿಯಾಂಕ್ ಖರ್ಗೆ, ಜಿಗಜಣಗಿ ಅವರ ಪ್ರಶ್ನೆಯನ್ನು ವಿವಿಧ ಆಯಾಮಗಳಿಂದ ವಿಮರ್ಶಿಸಬೇಕಾಗಿದೆ. ದಲಿತ ಸಮುದಾಯದವರೇ ಆಗಿರುವ ರಮೇಶ್ ಜಿಗಜಿಣಗಿಯವರಿಗೆ ಆರ್ ಎಸ್ ಎಸ್ ಗರ್ಭಗುಡಿಯೊಳಗೆ ಪ್ರವೇಶ ಸಿಗದಿರುವ ಹತಾಶೆಯ ಮಾತೇ? ಎಂದು ಪ್ರಶ್ನಿಸಿದ್ದಾರೆ.

ದಲಿತರಿಗೆ ಆರ್ ಎಸ್ ಎಸ್ ವಿಷಯ ಯಾಕೆ ಬೇಕು ಎಂಬ ರಮೇಶ್ ಜಿಗಜಿಣಗಿಯವರು ನನಗೆ ಹೇಳಿರುವ ಮತ್ತು ಕೇಳಿರುವ ಪ್ರಶ್ನೆಗೆ ಉತ್ತರ ಎಂದು ಅವರು ಬರೆದುಕೊಂಡಿದ್ದು, ಶ್ರೇಣಿಕೃತ ವ್ಯವಸ್ಥೆಯ ಮೂಲಭೂತವಾದವನ್ನು ನಂಬಿರುವ ಆರ್ ಎಸ್ ಎಸ್ ಸಹವಾಸಕ್ಕೆ ದಲಿತರು ಹೋಗಬೇಡಿ ಎಂದ ಎಚ್ಚರಿಕೆಯ ಮಾತುಗಳೇ? ಎಂದಿದ್ದಾರೆ.

ಸಮಾಜದಲ್ಲಿ ಶ್ರೇಷ್ಟತೆ ಭಾವನೆ ಹೊಂದಿರುವ ಜನರ ಹಿತಾಸಕ್ತಿ ಕಾಯಲು ರೂಪುಗೊಂಡಿರುವ ಆರ್ ಎಸ್ ಎಸ್ ಅನ್ನು ಪ್ರಶ್ನೆ ಮಾಡಲು ದಲಿತನಾಗಿ ನಿನಗೆ ಅರ್ಹತೆ ಇಲ್ಲ ಎಂದು ನನಗೆ ಹೇಳಿರುವ ಕುಹುಕುದ ಮಾತುಗಳೇ? ಆರ್ ಎಸ್ ಎಸ್ ನಂತಹ ವ್ಯವಸ್ಥೆಯನ್ನು ಸಂವಿಧಾನದ ಹಾದಿಗೆ ತರಲು ದಲಿತರಿಗೆ ಸಾಧ್ಯವಿಲ್ಲ ಎಂಬ ಹತಾಶೆಯ ಮಾತುಗಳೇ? ಎಂದು ಪ್ರಶ್ನಿಸಿದ್ದಾರೆ. ಈ ಬೆದರಿಕೆ ಹಿಂದಿರುವ ಕಾರಣಗಳೇನು? ಯಾರು ಉಳಿದಿಲ್ಲ ಎಂದರೆ ಏನರ್ಥ, ಆರ್ ಎಸ್ ಎಸ್ ಭಯೋತ್ಪಾದಕ ಸಂಘಟನೆಯೇ? ಪ್ರಶ್ನಿಸುವವರನ್ನು ಮುಗಿಸುತ್ತದೆಯೇ ಎಂದು ಕೇಳಿದ್ದಾರೆ.

ನಾನು ಬಾಬಾ ಸಾಹೇಬರ ಸಿದ್ಧಾಂತದವನು. ಪ್ರಶ್ನಿಸುವ ಧೈರ್ಯ ಮತ್ತು ವೈಚಾರಿಕತೆ ಅವರಿಂದಲೇ ಬಂದಿರುವುದು. ಬಾಬಾ ಸಾಹೇಬರನ್ನು ನಂಬಿದವರಿಗೆ ಭಯ ಇಲ್ಲ. ನಾನು ಸಂವಿಧಾನದ ರಕ್ಷಣೆಯ ನೆರಳಿನಲ್ಲಿರುವವನು. ಸಂವಿಧಾನದಡಿಯಲ್ಲಿ ಮಾನ್ಯತೆಯೇ ಇಲ್ಲದವರಿಗೆ ಭಯಪಡುವ ಜಾಯಮಾನ ನನ್ನದಲ್ಲ ಎಂದು ತಿರುಗೇಟು ನೀಡಿದ್ದಾರೆ. ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್ ರಕ್ತ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka MLC Election Results: ಅಡ್ಡ ಮತದಾನದ ನಡುವೆಯೇ ಕಾಂಗ್ರೆಸ್ 5, ಬಿಜೆಪಿ ತೆಕ್ಕೆಗೆ 2 ಸ್ಥಾನ; JDS ಆಘಾತಕಾರಿ ಸೋಲು

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

ಕರ್ನಾಟಕದಲ್ಲಿ ಮತ್ತೊಂದು ಮೇಜರ್ ಸರ್ಜರಿ: ಮಣಿವಣ್ಣನ್ ಸೇರಿ ಹಲವು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ, ಹಲವರ ವರ್ಗಾವಣೆ!

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!

ತಂತ್ರಜ್ಞಾನ ಸುಲಭವಾಗಿ ಎಲ್ಲರಿಗೂ ದೊರೆತಾಗ ಮಾತ್ರ ಪ್ರಗತಿ ಸಾಧ್ಯ: VivaTech ನಲ್ಲಿ ಪ್ರಧಾನಿ ಮೋದಿ!

SCROLL FOR NEXT