ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ 
ರಾಜ್ಯ

ಬಿಜೆಪಿ-ದಳಕ್ಕೆ ತಕ್ಕ ಉತ್ತರ: ವಿಪಕ್ಷಗಳು ಕುಚೋಧ್ಯ ಬಿಟ್ಟು ಜನರ ನೋವು ನಲಿವುಗಳಿಗೆ ಸ್ಪಂದಿಸಲಿ; ಬಿ.ಕೆ.ಹರಿಪ್ರಸಾದ್

ಬೇರೆ ಪಕ್ಷದ ಯಾರಿಗೂ ನಾವು ಬೆಂಬಲಿಸಿ ಎಂದು ಕೇಳಿರಲಿಲ್ಲ‌ ಆತ್ಮಸಾಕ್ಷಿಯ ಮತ ನೀಡಿ ಎಂದು ಅವರ ಪಕ್ಷದವರೇ ಹೇಳಿದ್ದರು. ಅವರೇ ಆತ್ಮಸಾಕ್ಷಿಯ ಮತಗಳನ್ನು ನೀಡಿದ್ದಾರೆ.

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಹಾಗೂ ಜನತಾದಳದವರು ಟೀಕೆ ಮಾಡುತ್ತಿದ್ದರು. ಈಗ ಅವರಿಗೆ ತಕ್ಕ ಉತ್ತರ ಸಿಕ್ಕಿದೆ. ಜನತೆಯ ವಿಶ್ವಾಸ ಕಾಂಗ್ರೆಸ್ ಪಕ್ಷದ ಜೊತೆಗಿದೆ" ಎಂದು ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರು ಹೇಳಿದರು.

ಬಿಜೆಪಿ ತನ್ನ ಕುಚೋಧ್ಯಗಳನ್ನು ಬಿಟ್ಟು ಜನರ ನೋವು ನಲಿವುಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಬೇರೆ ಪಕ್ಷದ ಯಾರಿಗೂ ನಾವು ಬೆಂಬಲಿಸಿ ಎಂದು ಕೇಳಿರಲಿಲ್ಲ‌ ಆತ್ಮಸಾಕ್ಷಿಯ ಮತ ನೀಡಿ ಎಂದು ಅವರ ಪಕ್ಷದವರೇ ಹೇಳಿದ್ದರು. ಅವರೇ ಆತ್ಮಸಾಕ್ಷಿಯ ಮತಗಳನ್ನು ನೀಡಿದ್ದಾರೆ. ಮತ ನೀಡಿದ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ" ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು, ಸೋನಿಯಾಗಾಂಧಿ ಅವರು, ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜನಪರವಾಗಿ ಮುನ್ನಡೆಯುತ್ತಿದೆ" ಎಂದರು.

ಮೂರು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಜನಪರ ಕೆಲಸಗಳಿಗೆ ಶಾಸಕರು ನೀಡಿರುವ ಬೆಂಬಲ ಈ ಪರಿಷತ್ ಚುನಾವಣೆ ಪಲಿತಾಂಶ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಗ್ಯಾರಂಟಿ ವಿರೋಧಿ ನಿಲುವನ್ನು ಅವರ ಪಕ್ಷದ ಶಾಸಕರೇ ವಿರೋಧಿಸಿ ಸಂದೇಶ ನೀಡಿದ್ದಾರೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ

ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್: ಗೋಹತ್ಯೆ ನಿಷೇಧ ಮಸೂದೆ ಪರಿಶೀಲಿಸುವತ್ತ ಸರ್ಕಾರದ ಚಿತ್ತ?

ಧರ್ಮಸ್ಥಳ ಪ್ರಕರಣ ತನಿಖೆ ಚುರುಕು: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ..!

ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರ ರೂಪಿಸಿಲ್ಲ, ಅಡ್ಡ ಮತದಾನ ಬಗ್ಗೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್