ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ 
ರಾಜ್ಯ

ಬಿಜೆಪಿ-ದಳಕ್ಕೆ ತಕ್ಕ ಉತ್ತರ; ವಿಪಕ್ಷಗಳು ಕುಚೋದ್ಯ ಬಿಟ್ಟು ಜನರ ನೋವು ನಲಿವುಗಳಿಗೆ ಸ್ಪಂದಿಸಲಿ: ಬಿ.ಕೆ ಹರಿಪ್ರಸಾದ್

ಬೇರೆ ಪಕ್ಷದ ಯಾರಿಗೂ ನಾವು ಬೆಂಬಲಿಸಿ ಎಂದು ಕೇಳಿರಲಿಲ್ಲ‌ ಆತ್ಮಸಾಕ್ಷಿಯ ಮತ ನೀಡಿ ಎಂದು ಅವರ ಪಕ್ಷದವರೇ ಹೇಳಿದ್ದರು. ಅವರೇ ಆತ್ಮಸಾಕ್ಷಿಯ ಮತಗಳನ್ನು ನೀಡಿದ್ದಾರೆ.

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಹಾಗೂ ಜನತಾದಳದವರು ಟೀಕೆ ಮಾಡುತ್ತಿದ್ದರು. ಈಗ ಅವರಿಗೆ ತಕ್ಕ ಉತ್ತರ ಸಿಕ್ಕಿದೆ. ಜನತೆಯ ವಿಶ್ವಾಸ ಕಾಂಗ್ರೆಸ್ ಪಕ್ಷದ ಜೊತೆಗಿದೆ" ಎಂದು ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರು ಹೇಳಿದರು.

ಬಿಜೆಪಿ ತನ್ನ ಕುಚೋಧ್ಯಗಳನ್ನು ಬಿಟ್ಟು ಜನರ ನೋವು ನಲಿವುಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಬೇರೆ ಪಕ್ಷದ ಯಾರಿಗೂ ನಾವು ಬೆಂಬಲಿಸಿ ಎಂದು ಕೇಳಿರಲಿಲ್ಲ‌ ಆತ್ಮಸಾಕ್ಷಿಯ ಮತ ನೀಡಿ ಎಂದು ಅವರ ಪಕ್ಷದವರೇ ಹೇಳಿದ್ದರು. ಅವರೇ ಆತ್ಮಸಾಕ್ಷಿಯ ಮತಗಳನ್ನು ನೀಡಿದ್ದಾರೆ. ಮತ ನೀಡಿದ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ" ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು, ಸೋನಿಯಾಗಾಂಧಿ ಅವರು, ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜನಪರವಾಗಿ ಮುನ್ನಡೆಯುತ್ತಿದೆ" ಎಂದರು.

ಮೂರು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಜನಪರ ಕೆಲಸಗಳಿಗೆ ಶಾಸಕರು ನೀಡಿರುವ ಬೆಂಬಲ ಈ ಪರಿಷತ್ ಚುನಾವಣೆ ಪಲಿತಾಂಶ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಗ್ಯಾರಂಟಿ ವಿರೋಧಿ ನಿಲುವನ್ನು ಅವರ ಪಕ್ಷದ ಶಾಸಕರೇ ವಿರೋಧಿಸಿ ಸಂದೇಶ ನೀಡಿದ್ದಾರೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

ಊರ್ಫಿ ಜಾವೇದ್‌ಗೆ 1 ಲಕ್ಷ, ಪೂನಂ ಪಾಂಡೆಗೆ 20,000 ರೂ: ಕೂಡಲೇ CJP ಸ್ಥಾಪಕ ದೀಪ್ಕೆ ಬಂಧಿಸಬೇಕು, ಇನ್ಫ್ಲುಯೆನ್ಸರ್ ದೂರು ದಾಖಲು! Video