ಪ್ರಿಯಾಂಕ್ ಖರ್ಗೆ, ಪ್ರಲ್ಹಾದ ಜೋಶಿ  
ರಾಜ್ಯ

ಪ್ರಿಯಾಂಕ್ ಖರ್ಗೆ 'ಹಳೇ ರೇಡಿಯೋ' ಇದ್ದಂತೆ; ಅವರ ಮಾತಿಗೆ ಕಿಮ್ಮತ್ತಿಲ್ಲ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಪ್ರಿಯಾಂಕ್ ಖರ್ಗೆ ಅವರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಳೇ ರೇಡಿಯೋ ಇದ್ದಂತೆ ಅವರ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ತಿರುಗೇಟು ನೀಡಿದರು.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೂರು ವರ್ಷ ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಯಾವುದೇ ನೋಂದಣಿ ಮಾಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಸಚಿವ ಪ್ರಿಯಾಂಕ ಖರ್ಗೆ ಅವರು 'ಹಳೇಯ ರೆಡಿಯೋ ಹಾಗೇ'. ಹಾಡಿದ್ದನ್ನೇ ರಿಪೀಟ್ ರಿಪೀಟ್ ಹಾಡುತ್ತಿರುತ್ತಾರೆ. ಹಾಗಾಗಿ ಅವರ ಮಾತುಗಳಿಗೆ ಬೆಲೆಯೇ ಇಲ್ಲ ಎಂದರು.

ಸಿಎಂ ಕುರ್ಚಿ ಮೇಲೆ ಪ್ರಿಯಾಂಕ್ ಖರ್ಗೆ ಕಣ್ಣು! ಪ್ರಿಯಾಂಕ್ ಖರ್ಗೆ ಅವರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಿದ್ದಾರೆ. ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುವುದು ಅಪ್ರಸ್ತುತ. ಈಗಾಗಲೇ ಸಂಘದ ಹಿರಿಯರು ಉತ್ತರಿಸಿದ್ದಾರೆ ಎಂದು ಜೋಶಿ ಸ್ಪಷ್ಟಪಡಿಸಿದರು.

ಬೆಂಗಳೂರನ್ನು ಅಧೋಗತಿಗೆ ತಂದ ಡಿಕೆ ಶಿವಕುಮಾರ್ ಸಿಎಂ ಆಗಿದ್ದಾರೆ. ಮುಂದೆ ರಾಜ್ಯವೂ ಅದೇ ಸ್ಥಿತಿಗೆ ಬರಲಿದೆ. "ಕರ್ನಾಟಕ ಸರ್ಕಾರ ಭ್ರಷ್ಟಾಚಾರಮುಕ್ತ ಅಲ್ಲ; ಭ್ರಷ್ಟಾಚಾರಯುಕ್ತ ಸರ್ಕಾರವಾಗಿದೆ" ಎಂಬುದನ್ನು ಸ್ವತಃ ಆ ಪಕ್ಷದ ಶಾಸಕರೇ ಆರೋಪಿಸಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇನ್ನೂ ವಿಧಾನ‌ ಪರಿಷತ್ ಚುನಾವಣೆಯಲ್ಲಿ ಶಾಸಕರು ಅಡ್ಡ ಮತದಾನ ಮಾಡಿರುವುದನ್ನು ಹೈಕಮಾಂಡ್ ಗಂಭೀರವಾಗಿ ತೆಗೆದುಕೊಂಡಿದ್ದು, ಕಠಿಣ ಕ್ರಮ ಕೈಗೊಳ್ಳಲಿದೆ. ಪಕ್ಷದಲ್ಲಿ ಇದ್ದುಕೊಂಡು ಶಾಸಕರು ಅಡ್ಡ ಮತದಾನ ಮಾಡಿರುವುದು ದುರದೃಷ್ಟಕರ. ಅಂಥವರು ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಎಚ್ಚರಿಸಿದರು.

ಒಂದಿಬ್ಬರು ದುಡ್ಡಿನ ಆಮಿಷಕ್ಕೆ ಈ ರೀತಿ‌ ಮಾಡಿದಂತಿದೆ. ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಕಮಿಟಿ ಸಹ ರಚಿಸಲಾಗಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದರು.

ಶಾಸಕರು ಪಕ್ಷದಿಂದ ಆಯ್ಕೆ ಆಗಿರುತ್ತಾರೆ. ಶಾಸಕರು ಸ್ವಯಂ ಆಗಿ ಪಕ್ಷದ ಪರ ಮತದಾನ ಮಾಡುವುದು ಅವರ ಹಕ್ಕು. ಆದರೆ, ಹಣ, ಆಸೆ-ಆಮಿಷಕ್ಕೆ ಒಳಗಾಗಿ ದ್ರೋಹ ಬಗೆಯುವುದು ತಪ್ಪು. ಅಂಥವರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಯುತ್ತಾರೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ದೆಹಲಿಗೆ ಬರುತ್ತಿದ್ದಾರೆ. ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ ಎಂದರು.

ರಾಜ್ಯಾಧ್ಯಕ್ಷರ ಬದಲಾವಣೆ ಗೊತ್ತಿಲ್ಲ: ಇನ್ನು ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ತಮಗೆ ತಿಳಿದಿಲ್ಲ. ಆ ಬಗ್ಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ತಮ್ಮ ಹೆಸರು ಕೇಳಿಬರುತ್ತಿದೆ? ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ರಾಜನಾಥ ಸಿಂಗ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ಅವರ ನಿರ್ದೇಶನದಂತೆ ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದೆ. ಈಗ ಕೇಂದ್ರದಲ್ಲಿ ಮಂತ್ರಿ ಆಗಿದ್ದೇನೆ. ನಾನೇನು ರೇಸ್ ಅಲ್ಲಿ ಇಲ್ಲವೆಂದು ಜೋಶಿ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ರೊಚ್ಚಿಗೆದ್ದ ಇರಾನ್; ಹಾರ್ಮುಜ್ ಜಲಸಂಧಿ ಮತ್ತೆ ಬಂದ್!

3rd ODI: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ, 3-0 ಅಂತರದಲ್ಲಿ ಏಕದಿನ ಸರಣಿ ಕ್ಲೀನ್ ಸ್ವೀಪ್!

TMC, ಶಿವಸೇನೆ(ಯುಬಿಟಿ) ನಂತರ ವಿಭಜನೆಯತ್ತ SP; ಸಮಾಜವಾದಿ ಪಕ್ಷದ ಮುಖ್ಯಸ್ಥ ಸ್ಥಾನದಿಂದ ಅಖಿಲೇಶ್ ಕೆಳಗಿಳಿಯುವ ಸಾಧ್ಯತೆ!

3rd ODI: ಅರ್ಧಶತಕ, Dravid ದಾಖಲೆ ಸೇರಿ 2 ಅಪರೂಪದ Record ನಿರ್ಮಿಸಿದ ಹಿಟ್ ಮ್ಯಾನ್ Rohit Sharma

16 ಸ್ಥಿರ-ಡೋಸ್ ಔಷಧ ಸಂಯೋಜನೆಗಳಿಗೆ ಕೇಂದ್ರ ಸರ್ಕಾರ ನಿಷೇಧ