ಪ್ರಲ್ಹಾದ್ ಜೋಶಿ 
ರಾಜ್ಯ

ಅಡ್ಡ ಮತದಾನ: ಯಾವುದೇ ಒಂದು ಘಟನೆಯಿಂದ ನಾಯಕತ್ವ ಕೊರತೆ ಎನ್ನುವುದು ತಪ್ಪು- ಪ್ರಲ್ಹಾದ್ ಜೋಶಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಬೆಳಗಾವಿ: "ಅಡ್ಡ ಮತದಾನ ಗಂಭೀರವಾದದ್ದೇ ನಿಜ. ಆದರೆ, ಇಂಥ ಯಾವುದೇ ಒಂದು ಘಟನೆಯಿಂದ ಪಕ್ಷದಲ್ಲಿ ನಾಯಕತ್ವ ಕೊರತೆ ಎನ್ನುವುದು ತಪ್ಪಾಗುತ್ತದೆ" ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯಾವುದೋ ಒಂದರಿಂದ ನಾಯಕತ್ವ ಕೊರತೆ ಎನ್ನಲಾಗದು. ಎಲ್ಲಾ ಅಡೆತಡೆ, ಏಳುಬೀಳು ಎದುರಿಸಿ ರಾಜ್ಯದಲ್ಲಿ, ದೇಶದಲ್ಲಿ ಹಿಂದೆಯೂ ಬಿಜೆಪಿ ಬಲಿಷ್ಠವಾಗಿತ್ತು. ಈಗಲೂ ಇದೆ. ಮುಂದೆಯೂ ಮತ್ತಷ್ಟು ಗಟ್ಟಿಯಾಗಿರಲಿದೆ ಎಂದು ಹೇಳಿದರು.

ರಾಜ್ಯಾಧ್ಯಕ್ಷ ಅನ್ನೋದು ಅಪ್ರಸ್ತುತ: ರಾಜ್ಯ ಬಿಜೆಪಿಗೆ ಮುಂದಿನ ದಿನಗಳಲ್ಲಿ ನಾನು ರಾಜ್ಯಾಧ್ಯಕ್ಷ ಅನ್ನೋದು ಅಪ್ರಸ್ತುತ. ಬೇರೆ ನಾಯಕರು ಇದ್ದಾರೆ ಎಂದ ಜೋಶಿ, ರಾಜ್ಯಾಧ್ಯಕ್ಷ ಬಗ್ಗೆ ಹೈಕಮಾಂಡ್ ಆಗಲಿ, ನಾನಾಗಲಿ ಯಾವತ್ತೂ ಹೇಳಿಲ್ಲವಲ್ಲ. ನಾನು ಅದರ ಆಕಾಂಕ್ಷಿಯೂ ಅಲ್ಲವೆಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

2028ಕ್ಕೆ ಬಿಜೆಪಿ ಆಡಳಿತ: ರಾಜ್ಯದಲ್ಲಿ 2028ಕ್ಕೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಂದೆ ಇಲ್ಲೂ ಬಿಜೆಪಿ ಆಡಳಿತ ನಿಶ್ಚಿತ. ನಮ್ಮ ಹೈಕಮಾಂಡ್ ರಾಜ್ಯದಲ್ಲಿನ ಎಲ್ಲ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tri Series Final: ವೈಭವ್ ಸೂರ್ಯವಂಶಿ ಸ್ಫೋಟಕ ಅರ್ಧಶತಕ; ಶ್ರೀಲಂಕಾ ಹುಟ್ಟಡಗಿಸಿ ಟ್ರೋಫಿಗೆ ಮುತ್ತಿಟ್ಟ ಭಾರತ!

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜಾಮ್ ? : NEET ಪರೀಕ್ಷೆಗೆ ತಡವಾಗಿ ಬಂದರೆಂದು ಪ್ರವೇಶ ನಿರಾಕರಣೆ, ಕಣ್ಣೀರು ಹಾಕಿದ ವಿದ್ಯಾರ್ಥಿಗಳು-Video

ತಮಿಳುನಾಡು ಸಮುದ್ರಾಹಾರ ರಫ್ತು ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು, 46 ಮಂದಿ ಆಸ್ಪತ್ರೆಗೆ ದಾಖಲು

ಅಡ್ಡಮತದಾನ ಮಾಡಿದವರಿಗೆ ಈ ಜನ್ಮದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮಾಡುತ್ತೇನೆ: ಆರ್. ಅಶೋಕ್ ಆಕ್ರೋಶ

'ಕೈ' ಪಡೆಗೆ ಹೊಸ ನಾಯಕತ್ವ; KPCC ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ..!