ಯು ಟಿ ಖಾದರ್  
ರಾಜ್ಯ

ಮುಂದಿನ ದಿನಗಳಲ್ಲಿ ಗ್ರಾಮ ಗ್ರಾಮಕ್ಕೂ ಯೋಗಾಭ್ಯಾಸ ವಿಸ್ತರಣೆ, ಯೋಗ ಗುರುಗಳ ನೇಮಕ: ಆರೋಗ್ಯ ಸಚಿವ ಯು.ಟಿ ಖಾದರ್; Video

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯವಾಗಿದ್ದು, ನಾವು ಮಾತ್ರವಲ್ಲ ಎಲ್ಲರೂ ಯೋಗವನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಂಡಾಗ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಯು ಟಿ ಖಾದರ್ ಹೇಳಿದರು.

ಬೆಂಗಳೂರು: ಆರೋಗ್ಯಕರವಾದ ಸಮಾಜದ ನಿರ್ಮಾಣಕ್ಕೆ ಯೋಗಾಭ್ಯಾಸ ಮಾಡುವುದು ಅತ್ಯಂತ ಅಗತ್ಯ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ಇಂದು ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧ ಮುಂದೆ ಸರ್ಕಾರದ ಆಯುಷ್ ಇಲಾಖೆ ವತಿಯಿಂದ 'ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದಡಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯವಾಗಿದ್ದು, ನಾವು ಮಾತ್ರವಲ್ಲ ಎಲ್ಲರೂ ಯೋಗವನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಂಡಾಗ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಇಂದು ಯೋಗ ನಮ್ಮ ದೇಶ ಮಾತ್ರವಲ್ಲ ವಿದೇಶಕ್ಕೂ ಹಬ್ಬಿದೆ. ಯೋಗ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ, ಪ್ರತಿದಿನವೂ ಯೋಗದಿನವಾಗಬೇಕು ಎಂದರು.

ನಾವು ಮುಂದಿನ ಪೀಳಿಗೆಗೆ ಯೋಗ ಮಾಡುವುದನ್ನು ವರ್ಗಾಯಿಸಬೇಕು. ಗ್ರಾಮ ಗ್ರಾಮಕ್ಕೂ ಯೋಗ ವಿಸ್ತರಿಸುತ್ತೇವೆ. ಈಗಾಗಲೇ ಹಲವು ಗ್ರಾಮದಲ್ಲಿ ಯೋಗ ಗುರುಗಳಿದ್ದಾರೆ. ಇದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಬೇಕಿದೆ. ಸಿಎಂ ಮುಂಬೈಯಲ್ಲಿದ್ದಾರೆ. ಡಿಸಿಎಂಗೆ ಅನಾರೋಗ್ಯ ಅದಕ್ಕೆ ಕಾರ್ಯಕ್ರಮಕ್ಕೆ ಬಂದಿಲ್ಲ. ಸಾವಿರಾರು ಜನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ರಾಜ್ಯಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಸಚಿವ ಖಾದರ್ ತಿಳಿಸಿದರು.

ಇದೇ ವೇಳೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯ ಕೋರಿ ಮಾತನಾಡಿದರು. ಯೋಗ, ಸಾವಿರಾರು ವರ್ಷಗಳ ಪುರಾತನವಾದದ್ದು, ಮಾನವನ ಆರೋಗ್ಯಕ್ಕೆ ಮಾರ್ಗ ತೋರಿಸಿದ್ದು ಯೋಗ. ಮನಸ್ಸು, ಶರೀರದ ಏಕತೆಗೆ ಯೋಗ ಮುಖ್ಯ. ಇಂದು ಜಗತ್ತು ಸ್ಪರ್ಧೆಗೆ ಬಿದ್ದಿದೆ.

ಇದರಿಂದ ಮಾನಸಿಕ ಮತ್ತು ಶರೀರದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಮೋದಿಯವರು ಅಂತರಾಷ್ಟ್ರೀಯ ಯೋಗ ದಿನ ಅಂತ 12 ವರ್ಷಗಳ ಹಿಂದೆ ಘೋಷಣೆ ಮಾಡಿದರು. ಯುವ ಸಮೂಹ ಪ್ರತಿದಿನ ಯೋಗಕ್ಕೆ ಸಮಯ ಮೀಸಲಿಡಬೇಕು. ಉತ್ತಮ ಆರೋಗ್ಯಕ್ಕಾಗಿ ಯೋಗ ಎಂಬ ಘೋಷಣೆ ಅನ್ವಯ ಯೋಗ ದಿನ ಆಚರಿಸಲಾಗುತ್ತದೆ. ಯೋಗವನ್ನು ಜೀವನದ ಅಂಗವಾಗಿ ಮಾಡಿಕೊಳ್ಳಬೇಕಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಯೋಗದ ಪ್ರಚಾರ ಹಾಗೂ ಜಾಗೃತಿ ಮೂಡಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ನಟಿಯರಾದ ಸುಧಾರಾಣಿ, ಹರಿಪ್ರಿಯಾ, ನಟ ವಶಿಷ್ಠ ಸಿಂಹ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಯೋಗ ಸಂಘಟನೆಗಳಿಂದ ಯೋಗ ಪ್ರದರ್ಶನ

ಆಯುಷ್ ಇಲಾಖೆಯಿಂದ ಇಂದು 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಗಿದೆ. ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಹಲವು ಯೋಗ ಸಂಘಟನೆಗಳಿಂದ ಯೋಗ ಪ್ರದರ್ಶನ ನಡೆದಿದೆ.

ಮಲ್ಲಗಂಭ ಪ್ರದರ್ಶನ‌

ಯೋಗ ಪಟುಗಳ ಗಮನ ಸೆಳೆದ ಮಲ್ಲಗಂಭ ಪ್ರದರ್ಶನ‌, ಬೆಳಗಾವಿ ಮಲ್ಲಗಂಭ ಅಕಾಡೆಮಿಯಿಂದ ಪ್ರದರ್ಶನ ನಡೆದಿದ್ದು, ಏಳುಬಾರಿ ವಿಶ್ವದಾಖಲೆ ಮಾಡಿರುವ ಅಕಾಡೆಮಿ ಹಲವು ದೇಶಗಳಲ್ಲಿ ಪ್ರದರ್ಶನ ನೀಡಿದೆ. ಸರ್ಕಾರಿ ಶಾಲೆಯ ಶಿಕ್ಷಕರ ನೇತೃತ್ವದ ಸರ್ಕಾರಿ ಶಾಲಾ ಮಕ್ಕಳ ಮಲ್ಲಗಂಭ ತಂಡ ಇಂದು ವಿಧಾನಸೌಧದ ಮುಂಭಾಗ ಮಲ್ಲಗಂಭ ಪ್ರದರ್ಶನ‌ ಮಾಡಿದೆ.

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ. ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!

Women's T20 World Cup: ಮರಿಝಾನ್ ಕಾಪ್ ಸ್ಫೋಟಕ ಬ್ಯಾಟಿಂಗ್, ಭಾರತದ ವಿರುದ್ಧ ದ. ಆಫ್ರಿಕಾಕ್ಕೆ 6 ವಿಕೆಟ್ ಗಳ ಭರ್ಜರಿ ಜಯ

ಅತ್ತ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಇರಾನ್- ಅಮೆರಿಕ ಮಾತುಕತೆ; ಇತ್ತ ಮತ್ತೊಮ್ಮೆ ಕಠಿಣ ದಾಳಿಯ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್

ಅವರಿಗೆ ಧೈರ್ಯವೇ ಇಲ್ಲ, ಪುಕ್ಕಲರು: RSS ವಿರುದ್ಧ ಬಿಕೆ ಹರಿಪ್ರಸಾದ್ ಕಿಡಿ

ಶಿವಸೇನೆ (ಯುಬಿಟಿ) ಗೆ ಭಾರಿ ಹೊಡೆತ! ಏಕನಾಥ್ ಶಿಂಧೆ ಬಣಕ್ಕೆ ಸಂಸದ ಓಂಪ್ರಕಾಶ್ ನಿಂಬಾಳ್ಕರ್ ಸೇರ್ಪಡೆ ನಿಶ್ಚಿತ!