ಸಚಿವ ಪ್ರಿಯಾಂಕ್ ಖರ್ಗೆ  
ರಾಜ್ಯ

RSSಗೆ ಭದ್ರತೆ ನೀಡುವ ನಮಗೆ, ಅದರ ವಿವರ ತಿಳಿಯುವ ಹಕ್ಕಿದೆ: ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್ ಸದಸ್ಯರು ಮೆರವಣಿಗೆ ನಡೆಸಿದಾಗ ಅವರಿಗೆ ಭದ್ರತೆ ಯಾರು ನೀಡುತ್ತಾರೆ? ವಾಣಿಜ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವುದಿಲ್ಲ. ಗೃಹ ಇಲಾಖೆಯೇ ಭದ್ರತೆ ಒದಗಿಸುತ್ತದೆ. ರಾಜ್ಯದ ಗೃಹ ಸಚಿವನಾಗಿ ಭದ್ರತೆ ನೀಡಲಾಗುತ್ತಿರುವ ಸಂಘಟನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ.

ಬೆಂಗಳೂರು: ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಚಟುವಟಿಕೆಗಳ ಕುರಿತು ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆಲ ದಿನಗಳ ಹಿಂದೆ ತಾವು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಸಂಘದ ನೋಂದಣಿ ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ಕೇಳಿ ಪತ್ರ ಬರೆದಿದ್ದನ್ನು ಸಮರ್ಥಿಸಿಕೊಂಡ ಅವರು, ರಾಷ್ಟ್ರದ ಹಿತದೃಷ್ಟಿಯಿಂದ ಸಂಘವು ತನ್ನ ಕಾರ್ಯವೈಖರಿಯ ಬಗ್ಗೆ ವಿವರ ನೀಡಬೇಕು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. ಅವರು ಉತ್ತರ ನೀಡಲಿ. ಇದು 100 ವರ್ಷಗಳ ಇತಿಹಾಸ ಹೊಂದಿರುವ ಸಂಘಟನೆಯ ನೋಂದಣಿ ದಾಖಲೆಗಳು ಕಳೆದುಹೋಗಿವೆಯೇ ಎಂದು ವ್ಯಂಗ್ಯವಾಡಿದ್ದಾರೆ.

ದೇಶಾದ್ಯಂತ ಆರ್‌ಎಸ್‌ಎಸ್ ಸಾವಿರಾರು ಶಾಖೆಗಳನ್ನು ನಡೆಸುತ್ತಿದೆ. ಆ ಶಾಖೆಗಳ ಸಂಖ್ಯೆ ಎಷ್ಟು, ಅವುಗಳನ್ನು ಯಾರು ನಿರ್ವಹಿಸುತ್ತಿದ್ದಾರೆ, ಅವುಗಳಿಗೆ ಹಣ ಎಲ್ಲಿಂದ ಬರುತ್ತದೆ ಹಾಗೂ ಹೇಗೆ ಬಳಸಲಾಗುತ್ತಿದೆ ಎಂಬ ಮಾಹಿತಿಯನ್ನು ಸಾರ್ವಜನಿಕವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ದೇಶದ ಹಿತದೃಷ್ಟಿಯಿಂದ ಮತ್ತು ಸಂಘದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಇರಬೇಕಾದರೆ, ಶಾಖೆಗಳ ಸಂಖ್ಯೆ, ಅವುಗಳ ನಿರ್ವಹಣೆ ಹಾಗೂ ನಿಧಿಗಳ ಬಗ್ಗೆ ಸಂಪೂರ್ಣ ವರದಿ ನೀಡಬೇಕು ಎಂದು ಹೇಳಿದರು.

ಆರ್‌ಎಸ್‌ಎಸ್ ಸದಸ್ಯರು ಮೆರವಣಿಗೆ ನಡೆಸಿದಾಗ ಅವರಿಗೆ ಭದ್ರತೆ ಯಾರು ನೀಡುತ್ತಾರೆ? ವಾಣಿಜ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವುದಿಲ್ಲ. ಗೃಹ ಇಲಾಖೆಯೇ ಭದ್ರತೆ ಒದಗಿಸುತ್ತದೆ. ರಾಜ್ಯದ ಗೃಹ ಸಚಿವನಾಗಿ ಭದ್ರತೆ ನೀಡಲಾಗುತ್ತಿರುವ ಸಂಘಟನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕು ನನಗಿದೆ" ಎಂದು ತಿಳಿಸಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ (ಕ್ರಾಸ್ ವೋಟಿಂಗ್) ವಿಚಾರವನ್ನು ಉಲ್ಲೇಖಿಸಿದ ಅವರು, "ಈ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರನ್ನು ಹೊಣೆಗಾರರನ್ನಾಗಿ ಮಾಡಬಹುದು. ಹೀಗಾಗಿ ಅವರು ದೆಹಲಿಗೆ ಹೋಗದಿರುವುದೇ ಒಳ್ಳೆಯದು" ಎಂದು ಟೀಕಿಸಿದರು.

ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೂ ಖರ್ಗೆ ತಿರುಗೇಟು ನೀಡಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಶಾಸಕರಿಗೆ ಕಾಂಗ್ರೆಸ್ 50 ರಿಂದ 60 ಕೋಟಿ ರೂಪಾಯಿ ಆಮಿಷ ಒಡ್ಡಿದೆ ಎಂಬ ಕುಮಾರಸ್ವಾಮಿ ಆರೋಪವನ್ನು ಅವರು ತಳ್ಳಿಹಾಕಿದರು.

ಆಧಾರರಹಿತ ಆರೋಪಗಳನ್ನು ಮಾಡುವ ಬದಲು ಸಾಕ್ಷ್ಯಾಧಾರಗಳನ್ನು ನೀಡಬೇಕು ಎಂದು ಸವಾಲು ಹಾಕಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!