ಕಿರುತೆರೆ ನಟಿ ವನಿತಾ 
ರಾಜ್ಯ

ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರಿಗೆ ಬಲೆ; ಲಕ್ಷಾಂತರ ರೂ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿಯ ಬಂಧನ

ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು.

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಬಳಿಕ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಅವರನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಶ್ರೀಮಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ಗಳಿಸುತ್ತಿದ್ದಳು ಎಂದು ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಯವಾದ ಸ್ನೇಹಿತರ ಬಳಿ ತಾನು ತೀವ್ರ ಕಷ್ಟದಲ್ಲಿದ್ದೇನೆ ಎಂದು ನಂಬಿಸುತ್ತಿದ್ದ ನಟಿ ವನಿತಾ, ‘ನನ್ನ ಚಿನ್ನದ ಆಭರಣಗಳನ್ನು ಅಡವಿಟ್ಟಿದ್ದೇನೆ, ಅದನ್ನು ಬಿಡಿಸಿಕೊಳ್ಳಲು ತುರ್ತಾಗಿ ಹಣ ಬೇಕಾಗಿದೆ. ಎರಡರಿಂದ ಮೂರು ದಿನಗಳಲ್ಲಿ ಸಾಲದ ಹಣವನ್ನು ವಾಪಸ್ ನೀಡುತ್ತೇನೆ’ ಎಂದು ನಂಬಿಸಿ ಹಣ ಪಡೆಯುತ್ತಿದ್ದಳು. ಅತ್ಯಂತ ಚಾಲಾಕಿಯಾಗಿದ್ದ ಈಕೆ, ಸಿಸಿಟಿವಿ ಕ್ಯಾಮೆರಾಗಳು ಇಲ್ಲದ ಜಾಗಗಳನ್ನು ಹುಡುಕಿ ಅಲ್ಲಿಗೆ ಹಣ ನೀಡುವವರನ್ನು ಕರೆಸಿಕೊಂಡು ನಗದು ಪಡೆದು ಪರಾರಿಯಾಗುತ್ತಿದ್ದಳು ಎಂದು ಆರೋಪಿಸಲಾಗಿದೆ.

ಒಮ್ಮೆ ಕೈಗೆ ಹಣ ಸಿಗುತ್ತಿದ್ದಂತೆ ನಟಿ ವನಿತಾ ತನ್ನ ಅಸಲಿ ರೂಪ ತೋರಿಸುತ್ತಿದ್ದಳು. ಹಣ ಕೊಟ್ಟವರು ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಕರೆ ಸ್ವೀಕರಿಸುತ್ತಿಲ್ಲವೆಂದು ಮೆಸೇಜ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ವಂಚಿಸುತ್ತಿದ್ದಳು ಎನ್ನಲಾಗಿದೆ.

ಇದೇ ರೀತಿ ಈ ನಟಿಯನ್ನು ನಂಬಿ ಹಣ ಕಳೆದುಕೊಂಡ ಯುವಕನೊಬ್ಬ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆಯ ವಂಚನೆಯ ಜಾಲ ಕೇವಲ ಒಂದು ಠಾಣೆಗೆ ಸೀಮಿತವಾಗಿರಲಿಲ್ಲ. ಗೋವಿಂದರಾಜನಗರ ಹಾಗೂ ಜ್ಞಾನಭಾರತಿ ಪೊಲೀಸ್ ಠಾಣೆಗಳಲ್ಲೂ ಈಕೆಯ ವಿರುದ್ಧ ಈ ಹಿಂದೆ ಹಲವು ದೂರುಗಳು ದಾಖಲಾಗಿದ್ದವು.

ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ತನಿಖೆ ನಡೆಸಿ, ವಂಚಕಿ ಕಿರುತೆರೆ ನಟಿ ವನಿತಾಳನ್ನು ಜೈಲಿಗಟ್ಟಿದ್ದಾರೆ. ಈಕೆಯ ಜಾಲಕ್ಕೆ ಬಿದ್ದಿರುವ ಇನ್ನೂ ಹಲವು ಸಂತ್ರಸ್ತರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel