ಹೈಕೋರ್ಟ್  online desk
ರಾಜ್ಯ

DRDO ಕ್ಯಾಂಪಸ್‌ನಿಂದ 21 ಶ್ವಾನಗಳು ನಾಪತ್ತೆ ಪ್ರಕರಣ: ತನಿಖೆಗೆ ಹೈಕೋರ್ಟ್ ಒಪ್ಪಿಗೆ

ಮಾರ್ಚ್ 9ರಂದು ಡಿಆರ್‌ಡಿಒ ಕ್ಯಾಂಪಸ್‌ನ ಒಳ ರಸ್ತೆಗಳಲ್ಲಿದ್ದ 21 ಬೀದಿ ನಾಯಿಗಳನ್ನು ಅನೈತಿಕವಾಗಿ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಂದಿನಿಂದ ಇಂದಿನವರೆಗೂ ನಾಯಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

ಬೆಂಗಳೂರು: ನಗರದ ಡಿಆರ್‌ಡಿಒ (DRDO) ಕ್ಯಾಂಪಸ್‌ನಿಂದ 21 ಬೀದಿ ನಾಯಿಗಳು ನಾಪತ್ತೆಯಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಇದೇ ವೇಳೆ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಡಿಆರ್‌ಡಿಒನ ಇಬ್ಬರು ಅಧಿಕಾರಿಗಳಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು ಎಂದೂ ತನಿಖಾ ಸಂಸ್ಥೆಗಳಿಗೆ ಸ್ಪಷ್ಟ ಸೂಚನೆ ನೀಡಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದ್ದು, ಈ ಹಿಂದೆ ಮಾರ್ಚ್ 25ರಂದು ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಡಿಆರ್‌ಡಿಒ ಎಸ್ಟೇಟ್ ಮ್ಯಾನೇಜರ್ ರಾಕೇಶ್ ಕುಮಾರ್ ಸಾಹು ಮತ್ತು ಕ್ಲೀನಿಂಗ್ ಸೂಪರ್‌ವೈಸರ್ ಟಿ.ಜಿ. ಸುಧಾಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಂಡಿದೆ.

ಪ್ರಕರಣದ ತನಿಖೆ ಅಗತ್ಯವಾಗಿದ್ದು, ತನಿಖೆಯಿಂದ ಹೊರಬರುವ ನಿಜಾಂಶಗಳ ಆಧಾರದ ಮೇಲೆ ಮಾತ್ರ ಅಪರಾಧಗಳ ಸ್ವರೂಪ ನಿರ್ಧಾರವಾಗಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ಅರ್ಜಿದಾರ ಅಧಿಕಾರಿಗಳಿಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಆದರೆ, ಅವರು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಸೂಚಿಸಿದೆ. ಅಲ್ಲದೆ, ತನಿಖೆಯನ್ನು ಆರು ವಾರಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಮಾರ್ಚ್ 9ರಂದು ಡಿಆರ್‌ಡಿಒ ಕ್ಯಾಂಪಸ್‌ನ ಒಳ ರಸ್ತೆಗಳಲ್ಲಿದ್ದ 21 ಬೀದಿ ನಾಯಿಗಳನ್ನು ಅನೈತಿಕವಾಗಿ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಂದಿನಿಂದ ಇಂದಿನವರೆಗೂ ನಾಯಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

ಅರ್ಜಿದಾರರ ಪರ ವಕೀಲರು, ಡಿಆರ್‌ಡಿಒ ಕ್ಯಾಂಪಸ್‌ಗೆ ಯಾರು ಪ್ರವೇಶಿಸಿ ನಾಯಿಗಳನ್ನು ಕೊಂಡೊಯ್ದರು ಎಂಬುದರ ಬಗ್ಗೆ ತನಿಖೆ ನಡೆಯಬೇಕು. ನಾಯಿಗಳ ನಾಪತ್ತೆಗೆ ನಮ್ಮ ಕಕ್ಷಿದಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ವಾದಿಸಿದರು.

ಇನ್ನೊಂದೆಡೆ, ಪ್ರಾಣಿ ಕಲ್ಯಾಣ ಸಂಘಟನೆ ಪರ ವಕೀಲರಾದ ವೈಶಾಲಿ ಹೆಗಡೆ, ಡಿಆರ್‌ಡಿಒ ಕ್ಯಾಂಪಸ್‌ಗೆ ಅನುಮತಿ ಇಲ್ಲದೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಸಂಪೂರ್ಣ ತನಿಖೆ ಅಗತ್ಯ ಎಂದು ನ್ಯಾಯಾಲಯದ ಗಮನ ಸೆಳೆದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಪ್ರಕರಣದ ತನಿಖೆಗೆ ಅನುಮತಿ ನೀಡಿ ಮುಂದಿನ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

Ketan Agarwal Murder: 33 ಡಿಗ್ರಿ ಬಿಸಿಲಲ್ಲಿ Hoodie ಯಾಕೆ ಹಾಕಿದ್ದ..? 2004 ಕರೆ, 238 ಗಂಟೆಗಳ ಸಂಭಾಷಣೆ.. ಭಾವಿ ಪತಿ ಹತ್ಯೆಗೆ ಭಾರಿ ಸಂಚು!

'ಅಪ್ಪಾ, ನನ್ನನ್ನು ಕಾಪಾಡಿ': ದೆಹಲಿಯಲ್ಲಿ 10 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ-ಕೊಲೆ, ಪುಟ್ಟ ಮಗುವಿನ ಕೊನೆಯ ಮಾತುಗಳು ವೈರಲ್!

'ಭಾರತೀಯರು ಅದನ್ನು ಮಾಡುವುದಿಲ್ಲ': ಉಕ್ರೇನ್ ಶಾಂತಿಪಾಲನಾ ಯೋಜನೆ ಕುರಿತು ಜೆಡಿ ವ್ಯಾನ್ಸ್ ಪ್ರಸ್ತಾಪಕ್ಕೆ ನಕ್ಕಿದ್ದ ಟ್ರಂಪ್, ಹೇಳಿದ್ದೇನು?