ಶೋಭಾ ಕರಂದ್ಲಾಜೆ 
ರಾಜ್ಯ

ತಮ್ಮನ್ನು ಯಾರೂ ಮುಟ್ಟಲಾಗದು ಎಂಬ ಭಾವನೆ; RSS ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಶೋಭಾ ಕರಂದ್ಲಾಜೆ; Video

ರಾಜ್ಯದಲ್ಲಿ ಹದಗೆಟ್ಟ ಕಾನೂನು-ಸುವ್ಯವಸ್ಥೆ ಕಡೆಗೆ ಗೃಹ ಸಚಿವರಾಗಿ ಗಮನ ಕೊಡದ ಪ್ರಿಯಾಂಕ್ ಖರ್ಗೆ ಅವರು, ಕೇವಲ ಆರೆಸ್ಸೆಸ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಕೂತಿದ್ದಾರೆ.

ಬೆಂಗಳೂರು: ಪ್ರತಿನಿತ್ಯ ಸುದ್ದಿ ವಾಹಿನಿಗಳಲ್ಲಿ ಕಾಣಿಸಿಕೊಳ್ಳಲು, ಸದಾ ಸುದ್ದಿಯಲ್ಲಿರುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೆಸ್ಸೆಸ್ ಬಗ್ಗೆ ಮಾತನಾಡುತ್ತಿರುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರನಾದ ತಮ್ಮನ್ನು ಯಾರೂ ಮುಟ್ಟಲಾಗದು ಎಂಬ ಭಾವನೆ ಅವರದು. ಆರೆಸ್ಸೆಸ್ ಅನ್ನು ಟೀಕಿಸುವುದನ್ನು ಬಿಟ್ಟು ನೀವೇನು ಮಾಡಿದ್ದೀರೆಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಹದಗೆಟ್ಟ ಕಾನೂನು-ಸುವ್ಯವಸ್ಥೆ ಕಡೆಗೆ ಗೃಹ ಸಚಿವರಾಗಿ ಗಮನ ಕೊಡದ ಪ್ರಿಯಾಂಕ್ ಖರ್ಗೆ ಅವರು, ಕೇವಲ ಆರೆಸ್ಸೆಸ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಕೂತಿದ್ದಾರೆ. ಹಿಂದೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದರು. ಅಲ್ಲಿ ಅವರ ಸಾಧನೆ ಶೂನ್ಯ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

ಹೆಣ್ಣು ಮಕ್ಕಳ ನಾಪತ್ತೆ ವಿಚಾರದಲ್ಲಿ ಅವರು ಗಮನ ಕೊಡುವುದಿಲ್ಲ. ಒಂದೆಡೆ ತಂದೆಯ ಹಿಂದೆ ಅಡಗುವುದು, ನಿರಂತರ ಅಧಿಕಾರದಲ್ಲಿರುವ ಕುಟುಂಬದಿಂದ ಬಂದು ಬಲಿತರಾದರೂ ದಲಿತನೆಂಬ ನೆರಳನ್ನು ತೆಗೆದುಕೊಳ್ಳುತ್ತಾರೆ. ಮೊದಲು ಪೊಲೀಸ್ ಇಲಾಖೆಯನ್ನು ತಹಬಂದಿಗೆ ತನ್ನಿ ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 20 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು