ಪ್ರಿಯಾಂಕ್ ಖರ್ಗೆ ಹಾಗೂ ಚಲನ್ 
ರಾಜ್ಯ

Mr. ಪ್ರಿಯಾಂಕ್ ಖರ್ಗೆ, ಸೀಟ್‌ಬೆಲ್ಟ್‌, ವೇಗದ ಮಿತಿ ನಿಮಗೆ ಅನ್ವಯಿಸುವುದಿಲ್ಲವೇ?

ನಿಮ್ಮ ವಾಹನದ ಮೇಲೆ ಒಟ್ಟು 2,500 ರೂ. ಮೊತ್ತದ 4 ಚಲನ್‌ಗಳು ಬಾಕಿ ಉಳಿದಿರುವುದರಿಂದ, ಈಗ ಶೇ. 50 ರಷ್ಟು ರಿಯಾಯಿತಿಯನ್ನು ಪಡೆದುಕೊಳ್ಳಲು ಮತ್ತು ನಿಮ್ಮ ಬಾಕಿಗಳನ್ನು ಆದಷ್ಟು ಬೇಗ ಪಾವತಿಸುವಂತೆ ನಾವು ಬಲವಾಗಿ ಸೂಚಿಸುತ್ತೇವೆ.

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, Mr. ಖರ್ಗೆ, ಸೀಟ್‌ಬೆಲ್ಟ್‌, ವೇಗದ ಮಿತಿ ನಿಮಗೆ ಅನ್ವಯಿಸುವುದಿಲ್ಲವೇ? ಎಂದು ಪ್ರಶ್ನಿಸಿದೆ.

ಪ್ರಿಯಾಂಕ್ ಖರ್ಗೆ ಅವರ ಕಾರು ಸಂಚಾರಿ ನಿಯಮ ಉಲ್ಲಂಘಿಸಿರುವ ಚಲನ್ ಅನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಕರ್ನಾಟಕ, ಪ್ರಿಯಾಂಕ್ ಖರ್ಗೆ ಅವರೇ ಸಂಚಾರ ನಿಯಮಗಳು ರಸ್ತೆಯಲ್ಲಿರುವ ಪ್ರತಿಯೊಬ್ಬರಿಗೂ ನಿಜವಾಗಿಯೂ ಜೀವನಾಡಿಳಾಗಿವೆ ಎಂಬ ನಿಮ್ಮ ಮಾತನ್ನು ನಾವು ಸಂಪೂರ್ಣವಾಗಿ ಒಪ್ಪುತ್ತೇವೆ.

ಆದರೆ... ಸೀಟ್‌ಬೆಲ್ಟ್‌ ಮತ್ತು ವೇಗದ ಮಿತಿ ನಿಮಗೆ ಅನ್ವಯಿಸುವುದಿಲ್ಲವೇ, ಖರ್ಗೆ ಅವರೇ? ನಿಮ್ಮ ವಾಹನ, KA42 GA 0099, ಅತೀ ವೇಗವಾಗಿ ಚಲಿಸುವ ಮೂಲಕ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದೆ! ಎಂದು ಬಿಜೆಪಿ ತಿರುಗೇಟು ನೀಡಿದೆ.

ನಿಮ್ಮ ವಾಹನದ ಮೇಲೆ ಒಟ್ಟು 2,500 ರೂ. ಮೊತ್ತದ 4 ಚಲನ್‌ಗಳು ಬಾಕಿ ಉಳಿದಿರುವುದರಿಂದ, ಈಗ ಶೇ. 50 ರಷ್ಟು ರಿಯಾಯಿತಿಯನ್ನು ಪಡೆದುಕೊಳ್ಳಲು ಮತ್ತು ನಿಮ್ಮ ಬಾಕಿಗಳನ್ನು ಆದಷ್ಟು ಬೇಗ ಪಾವತಿಸುವಂತೆ ನಾವು ಬಲವಾಗಿ ಸೂಚಿಸುತ್ತೇವೆ ಎಂದು ಬಿಜೆಪಿ ಪೋಸ್ಟ್ ಮಾಡಿದೆ.

ಇತ್ತೀಚಿಗೆ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ, ಸಂಚಾರ ನಿಯಮಗಳು ಕೇವಲ ರಸ್ತೆಯ ಮೇಲೆ ಇರುವ ಗೆರೆಗಳು ಮಾತ್ರವಲ್ಲ; ಅವು ಪ್ರತಿಯೊಬ್ಬರೂ ನಿಮ್ಮೊಂದಿಗೆ ಹಂಚಿಕೊಳ್ಳುವ ಜೀವನಾಡಿ. ಒಂದು ಕ್ಷಣದ ನಿರ್ಲಕ್ಷ್ಯವು ವರ್ಷಗಳ ಕನಸುಗಳನ್ನು ನುಚ್ಚುನೂರಾಗಿಸಬಹುದು. ನಿಮ್ಮದಷ್ಟೇ ಅಲ್ಲ, ಬೇರೆಯವರದ್ದೂ ಕೂಡ. ಹಳೆಯ ಪ್ರಮಾದಗಳನ್ನು ಸರಿಪಡಿಸಿಕೊಳ್ಳಲು ಇದು ನಿಮಗೆ ಮತ್ತೊಂದು ಅವಕಾಶ. ಬಾಕಿ ಇರುವ ಎಲ್ಲಾ ಚಲನ್‌ಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಿ, 100% ಜವಾಬ್ದಾರಿಯುತ ಚಾಲನೆಗೆ ಬದ್ಧರಾಗಿ ಎಂದು ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM; ಪ್ರತಿ ವರ್ಷ 900 ಕೆಜಿ ಚಿನ್ನ ಉತ್ಪಾದನೆ!

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ

ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ- ಸಿಲ್ಕ್ ಬೋರ್ಡ್ ವರೆಗೆ 1,300 ಕೋಟಿ ರೂ ವೆಚ್ಚದಲ್ಲಿ ಎಲಿವೇಟೆಡ್ ಕಾರಿಡಾರ್: ಟೋಲ್ ಬದಲು Value Capture Financing ಗೆ ಪ್ರಸ್ತಾವನೆ!

ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!

"ಅಪ್ಪಾ, ಅಮ್ಮಾ... ನಾನು ತಪ್ಪು ಮಾಡಿದೆ..." : ಗರ್ಭಿಣಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ, ಬಲಪಂಥೀಯ ಕಾರ್ಯಕರ್ತನ ವಿರುದ್ಧ ತನಿಖೆ