ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ 
ರಾಜ್ಯ

PWD ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆಯಲ್ಲಿ 13 ಕೋಟಿ ಮೌಲ್ಯದ ಆಸ್ತಿ ಪತ್ತೆ!

ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ, ಬೇನಾಮಿ ಬಾರ್ ಲೈಸೆನ್ಸ್, ಬೇನಾಮಿ ಆಸ್ತಿ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ದಾಳಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಮಂಜುನಾಥ್ ಗೆ ಸೇರಿದ 13.3 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ನಿನ್ನೆ ಇಡಿ ಅಧಿಕಾರಿಗಳು ಮಂಜುನಾಥ್ ಅವರಿಗೆ ಸೇರಿದ ಒಟ್ಟು 14 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ದಾಳಿ ವೇಳೆ 5.5 ಕೋಟಿ ನಗದು ಸೇರಿದಂತೆ 7.8 ಕೋಟಿ ಮೌಲ್ಯದ ಚಿನ್ನಾಭರಣವನ್ನು ಇಡಿ ವಶಪಡಿಸಿಕೊಂಡಿದೆ. ಇದರ ಜೊತೆಗೆ 3.3 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ, ಕ್ಯಾಶ್ ಬುಕ್, ಆಸ್ತಿ ಪತ್ರಗಳು ದಾಳಿಯಲ್ಲಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!

ಪ್ರಧಾನಿ ಮೋದಿ ಭೇಟಿ ಮಾಡಿದ Amazon CEO; ಭಾರತದಲ್ಲಿ ಹೆಚ್ಚುವರಿಯಾಗಿ 13 ಬಿಲಿಯನ್ ಡಾಲರ್ ಹೂಡಿಕೆ

ವಿವಿಧ ಇಲಾಖೆಗಳ 72,186 ಹುದ್ದೆಗಳ ನೇರ ನೇಮಕಾತಿ! ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಹೈಕೋರ್ಟ್​ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು

ಗೆಳೆಯನ ಅಂತ್ಯಕ್ರಿಯೆಗೆ ಕಣ್ಣೀರಿಡುತ್ತ ಓಡಿಬಂದ ಕೃಷಿ ತಾಪಂಡ; ವೈಶಾಕ್ ಕುಟುಂಬಸ್ಥರಿಂದ ನಟಿಗೆ ತೀವ್ರ ತರಾಟೆ!