ವಿಪಕ್ಷ ನಾಯಕ ಆರ್. ಅಶೋಕ್ 
ರಾಜ್ಯ

‘ಗ್ಯಾರಂಟಿ ಸಮಿತಿ' ಎಂದರೆ ಕಾಂಗ್ರೆಸ್‌ನ ಅತೃಪ್ತ ನಾಯಕರು- ಕಾರ್ಯಕರ್ತರನ್ನು ಸಾಕುವ ‘ಗಂಜಿ ಕೇಂದ್ರವೇ’-ಆರ್. ಅಶೋಕ್

ಹಣವಿಲ್ಲದೆ ಅಭಿವೃದ್ಧಿ ಕಾರ್ಯಗಳು ನಿಂತಿವೆ. ಸರ್ಕಾರಿ ಶಾಲೆಗಳ ಮಕ್ಕಳು ಪಠ್ಯ ಪುಸ್ತಕ, ಸಮವಸ್ತ್ರಕ್ಕಾಗಿ ಕಾಯುತ್ತಿದ್ದಾರೆ. ಕುಸಿಯುತ್ತಿರುವ ಕೊಠಡಿಗಳ ದುರಸ್ತಿಗೆ, ಮೊಟ್ಟೆಗೂ ದುಡ್ಡಿಲ್ಲದ ದುಸ್ಥಿತಿ ಇದೆ.

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲೂ ‘ಗ್ಯಾರಂಟಿ ಸಮಿತಿ’ಗಳನ್ನು ರಚಿಸುವ ಮೂಲಕ ಕಾಂಗ್ರೆಸ್‌ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಲು ಹೊರಟಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

‘ಗ್ಯಾರಂಟಿ ಸಮಿತಿ ಎಂದರೆ ಸಾರ್ವಜನಿಕರ ತೆರಿಗೆ ಹಣದಲ್ಲಿ ಕಾಂಗ್ರೆಸ್‌ನ ಅತೃಪ್ತ ನಾಯಕರು ಮತ್ತು ಕಾರ್ಯಕರ್ತರನ್ನು ಸಾಕುವ ‘ಗಂಜಿ ಕೇಂದ್ರವೇ’ ಎಂದು ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

‘ಹಣವಿಲ್ಲದೆ ಅಭಿವೃದ್ಧಿ ಕಾರ್ಯಗಳು ನಿಂತಿವೆ. ಸರ್ಕಾರಿ ಶಾಲೆಗಳ ಮಕ್ಕಳು ಪಠ್ಯ ಪುಸ್ತಕ, ಸಮವಸ್ತ್ರಕ್ಕಾಗಿ ಕಾಯುತ್ತಿದ್ದಾರೆ. ಕುಸಿಯುತ್ತಿರುವ ಕೊಠಡಿಗಳ ದುರಸ್ತಿಗೆ, ಮೊಟ್ಟೆಗೂ ದುಡ್ಡಿಲ್ಲದ ದುಸ್ಥಿತಿ ಇದೆ. ರಾಗಿ ಬೆಳೆದ ರೈತರು ಬೆಂಬಲ ಬೆಲೆ ಬಾಕಿಗಾಗಿ ಕಚೇರಿಗಳಿಗೆ ಅಲೆಯುತ್ತಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಹಣವನ್ನು ಪಕ್ಷದ ನಿರುದ್ಯೋಗಿ ಕಾರ್ಯಕರ್ತರಿಗೆ, ಅತೃಪ್ತ ನಾಯಕರಿಗೆ ಉದ್ಯೋಗ ನೀಡಲು ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡು’ ಎಂದಿದ್ದಾರೆ.

ಕಾಂಗ್ರೆಸ್‌ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ, ಈಗಿರುವ ನಾಲಾಯಕ್‌ ಗ್ಯಾರಂಟಿ ಸಮಿತಿಗಳನ್ನು ತಕ್ಷಣವೇ ವಿಸರ್ಜನೆ ಮಾಡಿ, ಈವರೆಗೂ ಕೊಟ್ಟಿರುವ ಸಂಬಳ ಮತ್ತು ಸವಲತ್ತುಗಳನ್ನು ವಾಪಸ್‌ ಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್