ಯೋಗಿ ಆದಿತ್ಯನಾಥ್ 
ರಾಜ್ಯ

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಹೂಡಿಕೆಗೆ ಆಹ್ವಾನ; 50 ಸಾವಿರ ಕೋಟಿ ಮೌಲ್ಯದ ಒಪ್ಪಂದಗಳಿಗೆ ಯೋಗಿ ಆದಿತ್ಯನಾಥ್ ಸಹಿ

ಉತ್ತರ ಪ್ರದೇಶದಲ್ಲಿ ಪ್ರಮುಖವಾಗಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದೆ ಬರುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಹ್ವಾನ ನೀಡಿದರು.

ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಬೆಂಗಳೂರಿನಲ್ಲಿ 50,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 15 ತಿಳುವಳಿಕೆ ಪತ್ರಗಳಿಗೆ (MoU) ಸಹಿ ಹಾಕಿದ್ದಾರೆ.

ನಗರದ ಹೊರವರ್ತುಲ ರಸ್ತೆಯಲ್ಲಿ ಬುಧವಾರ ರೋಡ್‌ ಶೋ ನಡೆಸಿದ ನಂತರ ಉತ್ತರ ಪ್ರದೇಶ ಜಾಗತಿಕ ಬೆಳವಣಿಗೆ ಕುರಿತ ಸಂವಾದದ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಂತ್ರಜ್ಞಾನ, ನವೋದ್ಯಮ ಮತ್ತು ಜಿಸಿಸಿ ಕಂಪನಿಗಳ ಹೂಡಿಕೆದಾರರೊಂದಿಗೆ ದಿನವಿಡೀ ಸಂವಾದ ನಡೆಸಿದ ಅವರು, ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಒಂಬತ್ತು ವರ್ಷಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಇದರಲ್ಲಿ ಹೆಚ್ಚಿನ ಹೂಡಿಕೆಗಳು ರಾಜ್ಯದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಸ್ಥಾಪಿಸಲು ಮೀಸಲಾಗಿವೆ. ಹೂಡಿಕೆಗಳನ್ನು ಆಕರ್ಷಿಸುವ ಗುರಿಯನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಕಳೆದ ಒಂಬತ್ತು ವರ್ಷಗಳಲ್ಲಿ ಉತ್ತರ ಪ್ರದೇಶವು ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಪ್ರಮುಖವಾಗಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದೆ ಬರುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಹ್ವಾನ ನೀಡಿದರು.

ಒಂಬತ್ತು ವರ್ಷಗಳ ಹಿಂದೆ, ಉತ್ತರ ಪ್ರದೇಶವನ್ನು ದುರಾಡಳಿತದಿಂದ ಬಳಲುತ್ತಿರುವ ಕಾನೂನುಬಾಹಿರ ರಾಜ್ಯವೆಂದು ನೋಡಲಾಗುತ್ತಿತ್ತು. ಇದನ್ನು ‘ಬಿಮಾರು’ ರಾಜ್ಯ ಎಂದು ಕರೆಯಲಾಗುತ್ತಿತ್ತು. ಕೃಷಿ ಮತ್ತು ರಾಜ್ಯ ಆರ್ಥಿಕತೆಗೆ ಯಾವುದೇ ಭರವಸೆ ಇರಲಿಲ್ಲ. ಇಂದು, ಉತ್ತರ ಪ್ರದೇಶವು ಇನ್ನು ಮುಂದೆ ‘ಬಿಮಾರು’ ರಾಜ್ಯವಲ್ಲ” ಎಂದು ಅವರು ಹೇಳಿದರು.

ಹೂಡಿಕೆದಾರರಲ್ಲಿ ಉತ್ತರ ಪ್ರದೇಶದ ವರ್ಚಸ್ಸು ಸುಧಾರಿಸಲು ಸರ್ಕಾರ ಕಳೆದ ದಶಕದಲ್ಲಿ ವ್ಯಾಪಕವಾಗಿ ಕೆಲಸ ಮಾಡಿದೆ ಎಂದು ಹೇಳಿದರು. “ನಮ್ಮಲ್ಲಿ ಕೈಗೆಟುಕುವ ಭೂಮಿ ಮತ್ತು ಕೌಶಲ್ಯಪೂರ್ಣ ಮತ್ತು ಕೌಶಲ್ಯರಹಿತ ಎರಡೂ ದೊಡ್ಡ ಕಾರ್ಯಪಡೆ ಇದೆ, ಇದು ಉದ್ಯಮಿಗಳಿಗೆ ಪ್ರಮುಖ ಪ್ರೋತ್ಸಾಹವಾಗಿದೆ” ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಆದಿತ್ಯನಾಥ್‌ ಮತ್ತು ಉತ್ತರ ಪ್ರದೇಶದ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್‌ ಕುಮಾರ್‌ ಖನ್ನಾ ಸಮ್ಮುಖದಲ್ಲಿತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!