ರಾಜ್ಯ

ಬೆಂಗಳೂರು: ಸೂಕ್ತ ದಾಖಲೆ ಇಲ್ಲದ 3 ಕೋಟಿ ಹಣ ಜಪ್ತಿ, ಇಬ್ಬರು ಆರೋಪಿಗಳ ಬಂಧನ!

ಶೆಡ್​​​ವೊಂದರಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು 3 ಕೋಟಿ ನಗದು ಪತ್ತೆಯಾಗಿದ್ದು, ಬೆಂಗಳೂರು ಪೊಲೀಸರು ಹಣವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್‌ ಸಾಲ ತೀರಿಸಲು ಹಣ ತಂದಿರುವುದಾಗಿ ಮಾಲೀಕರು ಹೇಳುತ್ತಿದ್ದಾರೆ.

ಬೆಂಗಳೂರು: ಶೆಡ್​​​ವೊಂದರಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು 3 ಕೋಟಿ ನಗದು ಪತ್ತೆಯಾಗಿದ್ದು, ಬೆಂಗಳೂರು ಪೊಲೀಸರು ಹಣವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್‌ ಸಾಲ ತೀರಿಸಲು ಹಣ ತಂದಿರುವುದಾಗಿ ಮಾಲೀಕರು ಹೇಳುತ್ತಿದ್ದು ಯಾವುದೇ ದಾಖಲೆಗಳನ್ನು ನೀಡದ ಹಿನ್ನೆಲೆ ಪ್ರಕರಣ ಅನುಮಾನಕ್ಕೆ ಕಾರಣವಾಗಿದೆ. ಕುರುಬರಹಳ್ಳಿಯಲ್ಲಿರುವ ಶೆಡ್‌ವೊಂದರಲ್ಲಿ ಈ ಹಣ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಾವರೆಕೆರೆ ನಿವಾಸಿ ನಾಗರಾಜ್ ಎಂಬುವರಿಗೆ ಈ ಹಣ ಸೇರಿದ್ದು ಎನ್ನಲಾಗಿದೆ. ನಾಗರಾಜ್ ಅವರ ಸ್ನೇಹಿತ ವೆಂಕಟೇಶ್ ಅವರಿಗೆ ಸೇರಿದ ಶೆಡ್‌ನಲ್ಲಿ ಹಣ ಸಂಗ್ರಹಿಸಲಾಗಿತ್ತು. ಗುಪ್ತ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಆದಾಯ ತೆರಿಗೆ (IT) ಇಲಾಖೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮೌನದ ಏಕೈಕ ಧ್ವನಿ’: ಗಾಜಾ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸಿ ಸೋನಿಯಾ ಗಾಂಧಿ ಬರೆದ ಲೇಖನಕ್ಕೆ ಬಿಜೆಪಿ ಟೀಕೆ

ಪ್ರಧಾನಿ ಮೋದಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡಿದ್ದಾರೆ, 2027ರ ವರ್ಷಾರಂಭಕ್ಕೆ Indiaಗೆ ಡೊನಾಲ್ಡ್ ಟ್ರಂಪ್: ಮಾರ್ಕೊ ರೂಬಿಯೊ

Hormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

Pak ಮಾಜಿ ವೇಗಿ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ LeT ಉಗ್ರರು ಭಾಗಿ, Video!

ಮೂರ್ಖತನದ ಯಾವುದೇ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಅಮೆರಿಕ ದಾಳಿಗೆ ಇರಾನ್ ಕಠಿಣ ಎಚ್ಚರಿಕೆ