ಶಾಸಕ ಪ್ರದೀಪ್ ಈಶ್ವರ್  
ರಾಜ್ಯ

Video: ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ, ಚಪ್ಪಲಿ ಎಸೆತ, ಕುಮಾರಣ್ಣ ನಿನ್ನ ಚೇಲಾಗಳಿಗೆ ಹೆದರಲ್ಲ! ತಾಕತ್ ಇದ್ರೆ ಬಾ... ಪ್ರದೀಪ್ ಈಶ್ವರ್ ಸವಾಲು

ಶಾಸಕ ಪ್ರದೀಪ್ ಈಶ್ವರ್ ಹುಚ್ಚ, ಎಚ್. ಡಿ. ಕುಮಾರಸ್ವಾಮಿ ಅವರ ಕ್ಷಮೆ ಕೇಳಬೇಕು. ಕಾರ್ಯಕ್ರಮದಿಂದ ಹೊರಹೋಗಬೇಕು ಎಂದು ಒಕ್ಕಲಿಗ ಸಮುದಾಯ ಮತ್ತು ಜೆಡಿಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರನ್ನು ವೇದಿಕೆಯಿಂದ ಆಚೆ ಕಳುಹಿಸುವಂತೆ ಕುಮಾರಸ್ವಾಮಿ, ಸಂಸದ ಡಾ.ಕೆ ಸುಧಾಕರ್ ಬೆಂಬಲಿಗರು ಗಲಾಟೆ ಮಾಡಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್ ಹುಚ್ಚ, ಎಚ್. ಡಿ. ಕುಮಾರಸ್ವಾಮಿ ಅವರ ಕ್ಷಮೆ ಕೇಳಬೇಕು. ಕಾರ್ಯಕ್ರಮದಿಂದ ಹೊರಹೋಗಬೇಕು ಎಂದು ಒಕ್ಕಲಿಗ ಸಮುದಾಯ ಮತ್ತು ಜೆಡಿಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದ ಡಾ. ಕೆ. ಸುಧಾಕರ್ ವೇದಿಕೆಗೆ ಬರುತ್ತಿದ್ದಂತೆ ವಾತಾವರಣ ಮತ್ತಷ್ಟು ಬಿಗಡಾಯಿಸಿತು. ಶಾಸಕ ಪ್ರದೀಪ್ ಈಶ್ವರ್ ಭಾಷಣ ಆರಂಭಿಸುತ್ತಿದ್ದಂತೆಯೇ ಗೊಂದಲದ ಗೂಡಾಗಿತ್ತು.

ಬಳಿಕ ಕಾರ್ಯಕ್ರಮದಿಂದ ಹೊರಗೆ ಬಂದ ಪ್ರದೀಪ್ ಈಶ್ವರ್, ಪದೇ ಪದೇ ಮೀಸೆ ತಿರುವಿ ಕೂದಲು ಕಿತ್ತು, ಎದೆ ತಟ್ಟಿಕೊಳ್ಳುತ್ತಾ ನನ್ನನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ ಎನ್ನುವ ರೀತಿಯಲ್ಲಿ ಹಾವ ಭಾವ ಪ್ರದರ್ಶಿಸಿದ್ದಾರೆ.

ಈ ವೇಳೆ ವ್ಯಕ್ತಿಯೊಬ್ಬರು ಶಾಸಕರ ಮೇಲೆ ಚಪ್ಪಲಿ ಎಸೆದಿದ್ದಾರೆ. ಆ ಚಪ್ಪಲಿ ಪೊಲೀಸ್ ಅಧಿಕಾರಿಗಳ ಮೇಲೆ ಬಿದ್ದಿದ್ದು, ಚಪಲಿ ಎಸೆದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ನಾನು ಜಿಲ್ಲೆಯ ಶೋಷಿತ ಏಕೈಕ ಓಬಿಸಿ ಶಾಸಕ. ಇವತ್ತು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಕರೆದು ಕುಮಾರಣ್ಣನ ಬೆಂಬಲಿಗರು ಶೋಷಿತ ಶಾಸಕನನ್ನು ಅವಮಾನ ಮಾಡಿದ್ದಾರೆ. ಕುಮಾರಣ್ಣ ನಿನ್ನ ಚೇಲಾಗಳಿಗೆ ಹೆದರಲ್ಲ. ಜಿಲ್ಲೆಯಲ್ಲಿ ಒಬಿಸಿ ಶೋಷಿತರು ಬದುಕಬಾರದಾ ಕುಮಾರಣ್ಣ ಎಂದು ಪ್ರಶ್ನಿಸಿದರು.

ಕುಮಾರಣ್ಣ ನೀನು ಡಿಕೆ ಶಿವಕುಮಾರ್ ಸಹಿಸಲ್ಲ. ಚಲುವಣ್ಣ ಸಹಿಸಲ್ಲ, ಓಬಿಸಿ ಶಾಸಕನನ್ನು ಸಹಿಸಲ್ಲ. ಕುಮಾರಣ್ಣ ನಿನ್ನ ಚೇಲಾಗಳಿಗೆ ಹೆದರಲ್ಲ. ತಾಕತ್ ಇದ್ರೆ ಬಾ..ಚಿಕ್ಕಬಳ್ಳಾಪುರದಲ್ಲಿ ಬಂದು ಚುನಾವಣೆಯಲ್ಲಿ ನಿಂತ್ಕೊಬೇಕು. ನೀನಾ...ನಾನಾ...ನೋಡೇ ಬಿಡೋಣ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಲವರ್ ಅಲ್ಲ.. ಬಾಂಬರ್..'; ಕಾರಿನಲ್ಲೇ ಯುವತಿಗೆ ಚಾಕು ಇರಿತ, ಪೆಟ್ರೋಲ್ ಬಾಂಬ್ ಸ್ಫೋಟಿಸಿದ ಭಗ್ನ ಪ್ರೇಮಿ, Video

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ; ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ, 2027ರಲ್ಲಿ ಟ್ರಂಪ್ ಭಾರತಕ್ಕೆ..!

ಕೋರ್ಟ್ ಆದೇಶವಿದ್ದರೂ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡ ವಿರುದ್ಧ ಬಂಧನ​​​​​​ ವಾರಂಟ್

NEET ಆಯ್ತು, ಈಗ TET ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ನಾಳೆ ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಮುಂದೂಡಿದ ಮಹಾರಾಷ್ಟ್ರ ಸರ್ಕಾರ!

ಮೆಜೆಸ್ಟಿಕ್ ಚಿತ್ರ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನ!