ಪ್ರದೀಪ್ ಈಶ್ವರ್, ಸಿದ್ದರಾಮಯ್ಯ 
ರಾಜ್ಯ

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!

ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಪ್ರದೀಪ್ ಈಶ್ವರ್ ಇಂದು ನನ್ನನ್ನು ಭೇಟಿಮಾಡಿ, ಕೆಂಪೇಗೌಡ ಜಯಂತಿ ಆಚರಣೆಯ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಕುಟುಂಬದವರನ್ನು ನಿಂದಿಸಿದ್ದು ಸೇರಿದಂತೆ ಅಂದು ನಡೆದ ಎಲ್ಲಾ ಘಟನೆಯನ್ನು ವಿವರಿಸಿ, ತಮ್ಮ ನೋವನ್ನು ಹಂಚಿಕೊಂಡರು. ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯವಾಗಿದ್ದು, ಇಲ್ಲೇ ಇದ್ದು ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಿದ್ದರಾಮಯ್ಯ ಧೈರ್ಯ ತುಂಬಿದ್ದಾರೆ.

ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೂ ದೂರವಾಣಿ ಕರೆಮಾಡಿ, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹೇಳಿದ್ದೇನೆ. ಪೋಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕನಿಗೆ ಈ ರೀತಿ ಆಗಿರುವುದು ಅಕ್ಷಮ್ಯ. ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಅಗತ್ಯ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಎರಡೇ ನಿಮಿಷ ಅಷ್ಟೇ": ಕಾರಿನಲ್ಲೇ ಸೆಕ್ಸ್​​ಗೆ ಒತ್ತಾಯಿಸಿದ ಕಾಮುಕ; ವಿಡಿಯೋ ಮಾಡಿದ ಯುವತಿ!

ಮೊದಲ ಬಾರಿಗೆ ಸಿನಿಮಾ ಹಾಡಿಗೆ 'ರೀಲ್ಸ್ ರಾಣಿ' ಸೋನು ಶ್ರೀನಿವಾಸ್ ಗೌಡ ಡ್ಯಾನ್ಸ್! ಕೇಕೆ' ಐಟಂ ಸಾಂಗ್ ಬಿಡುಗಡೆ, Video

ಮಂಗಳೂರು: ಸಮುದ್ರದಲ್ಲಿ ಬಿರುಗಾಳಿಗೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ದೋಣಿಯಿಂದ 6 ಮೀನುಗಾರರ ರಕ್ಷಣೆ! Video

ರಾಜಕೀಯ ನಾಯಕರ ಮಾತಿನಿಂದ ಆತಂಕ ಸೃಷ್ಟಿಯಾಗಿದ್ದು SIR ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ: 'ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ': ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!