ಪ್ರದೀಪ್ ಈಶ್ವರ್, ಸಿದ್ದರಾಮಯ್ಯ 
ರಾಜ್ಯ

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!

ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಪ್ರದೀಪ್ ಈಶ್ವರ್ ಇಂದು ನನ್ನನ್ನು ಭೇಟಿಮಾಡಿ, ಕೆಂಪೇಗೌಡ ಜಯಂತಿ ಆಚರಣೆಯ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಕುಟುಂಬದವರನ್ನು ನಿಂದಿಸಿದ್ದು ಸೇರಿದಂತೆ ಅಂದು ನಡೆದ ಎಲ್ಲಾ ಘಟನೆಯನ್ನು ವಿವರಿಸಿ, ತಮ್ಮ ನೋವನ್ನು ಹಂಚಿಕೊಂಡರು. ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯವಾಗಿದ್ದು, ಇಲ್ಲೇ ಇದ್ದು ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಿದ್ದರಾಮಯ್ಯ ಧೈರ್ಯ ತುಂಬಿದ್ದಾರೆ.

ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೂ ದೂರವಾಣಿ ಕರೆಮಾಡಿ, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹೇಳಿದ್ದೇನೆ. ಪೋಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕನಿಗೆ ಈ ರೀತಿ ಆಗಿರುವುದು ಅಕ್ಷಮ್ಯ. ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಅಗತ್ಯ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!