6 ಮೀನುಗಾರರ ರಕ್ಷಣೆ 
ರಾಜ್ಯ

ಮಂಗಳೂರು: ಸಮುದ್ರದಲ್ಲಿ ಬಿರುಗಾಳಿಗೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ದೋಣಿಯಿಂದ 6 ಮೀನುಗಾರರ ರಕ್ಷಣೆ! Video

ಜೂನ್ 29 ರಂದು ಸಂಜೆ 4 ಗಂಟೆ ಸುಮಾರಿಗೆ, ಕರಾವಳಿಯಿಂದ ಸುಮಾರು 33 ನಾಟಿಕಲ್ ಮೈಲು ದೂರದಲ್ಲಿರುವ ಭಾರತೀಯ ಮೀನುಗಾರಿಕಾ ದೋಣಿ ಮಂಜು ಮಾಥ್ ನಿಂದ ಅಪಾಯದ ಕರೆ ಬಂದಿತು.

ಮಂಗಳೂರು: ಮಂಗಳೂರು ಸಮೀಪದ ಸುರತ್ಕಲ್ ಬಳಿ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಮತ್ತು ಪ್ರಕ್ಷುಬ್ಧ ಸಮುದ್ರದ ನಡುವೆ ಸಂಕಷ್ಟಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ದೋಣಿಯಲ್ಲಿದ್ದ ಆರು ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆ(ICGS) ಮಂಗಳವಾರ ತಿಳಿಸಿದೆ.

ಜೂನ್ 29 ರಂದು ಸಂಜೆ 4 ಗಂಟೆ ಸುಮಾರಿಗೆ, ಕರಾವಳಿಯಿಂದ ಸುಮಾರು 33 ನಾಟಿಕಲ್ ಮೈಲು ದೂರದಲ್ಲಿರುವ ಭಾರತೀಯ ಮೀನುಗಾರಿಕಾ ದೋಣಿ ಮಂಜು ಮಾಥ್ ನಿಂದ ಅಪಾಯದ ಕರೆ ಬಂದಿತು ಎಂದು ICGS ಪ್ರಕಟಣೆಯಲ್ಲಿ ತಿಳಿಸಿದೆ.

ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮವಾಗಿ ದೋಣಿಗೆ ಹಾನಿಯಾಗಿದ್ದು, ದೋಣಿಯೊಳಗೆ ನೀರು ನುಗ್ಗತೊಡಗಿದ್ದರಿಂದ ಅದರಲ್ಲಿದ್ದ ಎಲ್ಲ ಆರು ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಹೀಗಾಗಿ ಕರಾವಳಿ ರಕ್ಷಣಾ ಪಡೆ ಹಡಗು 'ಐಸಿಜಿಎಸ್ ಸಚೇತ್' ತಕ್ಷಣ ಸಹಾಯಕ್ಕೆ ಧಾವಿಸಿತು.

ರಕ್ಷಣಾ ತಂಡವು 90 ನಿಮಿಷಗಳಲ್ಲಿ ಹಡಗನ್ನು ಅಪಾಯದಲ್ಲಿದ್ದ ಮೀನುಗಾರಿಕೆ ಹಡಗನ್ನು ತಲುಪಿತು ಮತ್ತು ಪ್ರಕ್ಷುಬ್ಧ ಸಮುದ್ರದ, ಬಲವಾದ ಗಾಳಿ, ಕಳಪೆ ಗೋಚರತೆ ಮತ್ತು ಕತ್ತಲೆ ಸಮೀಪಿಸುತ್ತಿರುವುದರ ನಡುವೆ, ಅತ್ಯಂತ ಸವಾಲಿನ ಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಿಸಲ್ಪಟ್ಟ ಮೀನುಗಾರರನ್ನು ನವಮಂಗಳೂರಿಗೆ ಕರೆತರಲಾಗಿದ್ದು, ಅಗತ್ಯ ವಿಧಿವಿಧಾನಗಳು ಪೂರ್ಣಗೊಳ್ಳುವವರೆಗೆ ಅವರಿಗೆ ಆಶ್ರಯ ನೀಡಲಾಗುತ್ತಿದೆ.

ಮಂಜು ಮಾತ್ ಹಡಗು ಉಡುಪಿಯಲ್ಲಿ ನೋಂದಾಯಿಸಲ್ಪಟ್ಟಿದೆ. 10.97 ಮೀಟರ್ ಉದ್ದದ ಫೈಬರ್‌ಗ್ಲಾಸ್ ಹಡಗನ್ನು 2019 ರಲ್ಲಿ ನಿರ್ಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ಸೈನಿಕರ ಸಾವಿನ ಬಗ್ಗೆ ಸಂಸತ್ ಗೆ ತಪ್ಪು ಮಾಹಿತಿ ಆರೋಪ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ನೋಟಿಸ್

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!

ಬೆಂಗಳೂರಿನ ಗರುಡ ಮಾಲ್ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕಟ್ಟಡ!

ಬೆಂಗಳೂರು ಅಭಿವೃದ್ಧಿ ನಿಧಿ ಹಂಚಿಕೆಯಲ್ಲಿ BJP ಶಾಸಕರಿಗೆ ಅನ್ಯಾಯ: ಸಿಎಂ ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಅಶೋಕ್ ಆಕ್ರೋಶ

ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳ: ₹5 ಲಕ್ಷ ಮೌಲ್ಯದ ಸ್ಮಾರ್ಟ್‌ಫೋನ್‌ ಕಳ್ಳತನ; ಸಿಸಿಟಿವಿ ದೃಶ್ಯ ನೋಡಿ!