ಸಂಗ್ರಹ ಚಿತ್ರ 
ರಾಜ್ಯ

ವಿದ್ಯಾರ್ಥಿಗಳ ನಿರಾಸಕ್ತಿ: ಮಂಗಳೂರು ವಿವಿ ವ್ಯಾಪ್ತಿಯ 3 ಸರ್ಕಾರಿ ಕಾಲೇಜುಗಳಲ್ಲಿ BA ಕೋರ್ಸ್ ರದ್ದು!

ಮಂಗಳೂರಿನ ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ ಮತ್ತು ಸಮಾಜಶಾಸ್ತ್ರ, ಪತ್ರಿಕೋದ್ಯಮ ಹಾಗೂ ಕನ್ನಡ ವಿಷಯಗಳ ಬಿಎ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಲಾಗಿದೆ.

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಿಎ (BA) ಕೋರ್ಸ್‌ಗಳ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಿವೆ.

ಸೋಮವಾರ ನಡೆದ ಮಂಗಳೂರು ವಿಶ್ವವಿದ್ಯಾಲಯದ ಈ ವರ್ಷದ ಮೊದಲ ಶೈಕ್ಷಣಿಕ ಮಂಡಳಿ (Academic Council) ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಆದೇಶದಂತೆ ಮಂಗಳೂರಿನ ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ ಮತ್ತು ಸಮಾಜಶಾಸ್ತ್ರ, ಪತ್ರಿಕೋದ್ಯಮ ಹಾಗೂ ಕನ್ನಡ ವಿಷಯಗಳ ಬಿಎ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಲಾಯಿತು.

ಅದೇ ರೀತಿ, ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಕನ್ನಡ ಮತ್ತು ಸಮಾಜಶಾಸ್ತ್ರ ವಿಭಾಗಗಳ ಬಿಎ ಕೋರ್ಸ್ ಸ್ಥಗಿತಗೊಳ್ಳಲಿದೆ.

ಉಡುಪಿಯ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಇಂಗ್ಲಿಷ್, ಇತಿಹಾಸ ಹಾಗೂ ರಾಜಕೀಯ ವಿಜ್ಞಾನ ವಿಷಯಗಳ ಹೊಸ ಬ್ಯಾಚ್‌ಗಳನ್ನೂ ಈ ವರ್ಷ ಆರಂಭಿಸದಿರಲು ನಿರ್ಧರಿಸಲಾಗಿದೆ.

ಇದೇ ವೇಳೆ, ಉಪ್ಪಿನಂಗಡಿ, ಪುಂಜಾಲಕಟ್ಟೆ ಹಾಗೂ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮೆ (BFSI), ಮಾನವ ಸಂಪನ್ಮೂಲ ನಿರ್ವಹಣೆ (HR Operations), ಲಾಜಿಸ್ಟಿಕ್ಸ್ ವಿಭಾಗದ ಬಿಕಾಂ ಹಾಗೂ ಬಿಎಸ್ಸಿ ಕೋರ್ಸ್‌ಗಳಿಗೆ ಅನುಮೋದನೆ ನೀಡಲಾಗಿದೆ.

ಜೊತೆಗೆ, ಮೂಡಿಪು ಮತ್ತು ಹಳೆಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಿಕಾಂ ಹಾಗೂ ಬಿಬಿಎ ಕೋರ್ಸ್‌ಗಳ ವಿದ್ಯಾರ್ಥಿ ಪ್ರವೇಶ ಸಾಮರ್ಥ್ಯವನ್ನು ಹೆಚ್ಚಿಸಲು ಸಹ ಒಪ್ಪಿಗೆ ನೀಡಲಾಗಿದೆ.

ಸಭೆಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು, ವಿಶ್ವದಾದ್ಯಂತ ಭೂಕಂಪ, ಭೂಕುಸಿತ, ಪ್ರವಾಹ ಹಾಗೂ ಸುನಾಮಿಯಂತಹ ಪ್ರಕೃತಿ ವಿಕೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಕುರಿತು ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಓಪನ್ ಎಲೆಕ್ಟಿವ್ ವಿಷಯಗಳಲ್ಲಿ ವಿಪತ್ತು ನಿರ್ವಹಣೆ ಕುರಿತ ಪಠ್ಯವನ್ನು ಸೇರಿಸುವಂತೆಯೂ ಅವರು ಸಲಹೆ ನೀಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಸಂಬಂಧಿತ ಪರಿಷ್ಕೃತ ಪಠ್ಯಕ್ರಮಗಳ ಕುರಿತ ಚರ್ಚೆ ವೇಳೆ, ಜಾಗತಿಕ ಆಹಾರ ಬಿಕ್ಕಟ್ಟಿನ ಕುರಿತು ಪಠ್ಯವನ್ನು ಸೇರಿಸುವಂತೆಯೂ ವಿಭಾಗದ ಮುಖ್ಯಸ್ಥರಿಗೆ ಸೂಚಿಸಿದರು.

"ಆಹಾರದ ಗುಣಮಟ್ಟ ಮತ್ತು ತಂತ್ರಜ್ಞಾನ ಮಾತ್ರವಲ್ಲ, ಭವಿಷ್ಯದಲ್ಲಿ ಎದುರಾಗಬಹುದಾದ ಆಹಾರ ಕೊರತೆಯನ್ನು ಹೇಗೆ ಎದುರಿಸಬಹುದು ಎಂಬ ಅರಿವನ್ನೂ ವಿದ್ಯಾರ್ಥಿಗಳಿಗೆ ಮೂಡಿಸಬೇಕು" ಎಂದು ಕುಲಪತಿಗಳು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಭಾರತದ ಜಲ ಬಾಂಬ್‌ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!

'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ..!

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ, ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!

JDS ನಲ್ಲಿ ಇರೋದೆ 18 ಶಾಸಕರು, ಅವರಿಗೆ 70-80 ಕ್ಷೇತ್ರ ಬೇಕಂತೆ! ಸ್ವರೂಪ್ ರಾಜಕೀಯಕ್ಕೆ ಹೊಸಬ- ಪ್ರತಿದಿನ 'ಲಾಟರಿ' ಹೊಡೆಯಲ್ಲ; ಪ್ರೀತಂಗೌಡ

BJP vs BJP: ಮುತ್ತಪ್ಪ ರೈ ಕೈಕೆಳಗೆ ಲೂಟಿ ಹೊಡೆಯುತ್ತಿದ್ದ ವ್ಯಕ್ತಿಗೆ ದುಡ್ಡಿನ ಅಮಲು; ವಿಶ್ವನಾಥ್ ವಿರುದ್ಧ ಡಿವಿಎಸ್ ವಾಗ್ದಾಳಿ