ಪ್ರಿಯಾಂಕ್ ಖರ್ಗೆ  
ರಾಜ್ಯ

SIR ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಸಜ್ಜು, ಎಲ್ಲಾ ಕಾನೂನು ಆಯ್ಕೆಗಳ ಪರಿಶೀಲನೆ: ಸಚಿವ ಪ್ರಿಯಾಂಕ್ ಖರ್ಗೆ

ಎಸ್‌ಐಆರ್ ಕುರಿತು ರಾಜ್ಯ ಸಚಿವ ಸಂಪುಟ ವ್ಯಕ್ತಪಡಿಸಿದ್ದ ಆಕ್ಷೇಪಣೆಗಳನ್ನು ಕಳೆದ ವಾರವೇ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಕುರಿತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ಅವರಿಗೂ ಮಾಹಿತಿ ನೀಡಲಾಗಿದೆ.

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಸಂಬಂಧ ರಾಜ್ಯ ಸರ್ಕಾರ ವ್ಯಕ್ತಪಡಿಸಿರುವ ಆಕ್ಷೇಪಣೆಗಳಿಗೆ ಇನ್ನೂ ಚುನಾವಣಾ ಆಯೋಗ (ECI) ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ, ಈ ವಿಷಯದಲ್ಲಿ ಲಭ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಕುರಿತು ರಾಜ್ಯ ಸಚಿವ ಸಂಪುಟ ವ್ಯಕ್ತಪಡಿಸಿದ್ದ ಆಕ್ಷೇಪಣೆಗಳನ್ನು ಕಳೆದ ವಾರವೇ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಕುರಿತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ಅವರಿಗೂ ಮಾಹಿತಿ ನೀಡಲಾಗಿದೆ. ಆದರೆ, ಇದುವರೆಗೆ ಯಾವುದೇ ಸ್ಪಷ್ಟನೆ ಬಂದಿಲ್ಲ ಎಂದು ಹೇಳಿದರು.

"ಲಾಜಿಕಲ್ ಡಿಸ್ಕ್ರೆಪೆನ್ಸಿ (Logical Discrepancy) ಎಂದರೇನು? ಅದನ್ನು ಹೇಗೆ ಗುರುತಿಸಲಾಗುತ್ತದೆ? ಯಾವ ನ್ಯಾಯಮಂಡಳಿ (Tribunal) ಇದರ ವಿಚಾರಣೆ ನಡೆಸಲಿದೆ? ಸಾರ್ವಜನಿಕರ ದೂರುಗಳನ್ನು ಹೇಗೆ ಪರಿಹರಿಸಲಾಗುತ್ತದೆ? ಎಂಬ ಹಲವು ಪ್ರಶ್ನೆಗಳನ್ನು ನಾವು ಚುನಾವಣಾ ಆಯೋಗಕ್ಕೆ ಕೇಳಿದ್ದೇವೆ. ಆದರೆ, ಯಾವುದೇ ಉತ್ತರ ಬಂದಿಲ್ಲ.

ಅಧಿಕಾರಿಗಳು ಈ ಪ್ರಶ್ನೆಗಳಿಗೆ ಉತ್ತರ ನೀಡುವ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಲಭ್ಯವಿರುವ ಎಲ್ಲ ಕಾನೂನು ಮಾರ್ಗಗಳನ್ನು ಪರಿಶೀಲಿಸುತ್ತೇವೆ ಎಂದು ತಿಳಿಸಿದರು.

SIRಗೆ ವಿರೋಧವಲ್ಲ, ಪ್ರಕ್ರಿಯೆ ಬಗ್ಗೆ ಆತಂಕ

ರಾಜ್ಯ ಸರ್ಕಾರ ಎಸ್‌ಐಆರ್ ಪ್ರಕ್ರಿಯೆಗೆ ವಿರೋಧವಲ್ಲ. ಆದರೆ, ಈ ಹಿಂದೆ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಲವು ದೋಷಗಳು ಕಂಡುಬಂದಿವೆ ಎಂದು ಹೇಳಿದರು.

ಎಸ್‌ಐಆರ್‌ನ ಉದ್ದೇಶ ಹೆಚ್ಚು ಜನರನ್ನು ಮತದಾರರ ಪಟ್ಟಿಗೆ ಸೇರಿಸುವುದಾಗಿರಬೇಕು. ಆದರೆ, ಈಗಿನ ಪ್ರಕ್ರಿಯೆ ಒಳಗೊಳ್ಳುವಿಕೆಯ ಬದಲು ಹೊರಗಿಡುವಿಕೆಯಂತಿದೆ. 'ಲಾಜಿಕಲ್ ಡಿಸ್ಕ್ರೆಪೆನ್ಸಿ' ಎಂಬ ಹೆಸರಿನಲ್ಲಿ ಹಲವು ರಾಜ್ಯಗಳಲ್ಲಿ ಕೋಟ್ಯಂತರ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ" ಎಂದು ಆರೋಪಿಸಿದರು.

ಇದೇ ವೇಳೆ ಕರ್ನಾಟಕದಲ್ಲಿ ಇದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಚುನಾವಣಾ ಆಯೋಗ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದ ಸಚಿವರು, ರಾಜ್ಯ ಸರ್ಕಾರ ಈಗಾಗಲೇ ಆಯೋಗಕ್ಕೆ ಪತ್ರ ಬರೆದು ಹಲವು ಪ್ರಶ್ನೆಗಳನ್ನು ಕೇಳಿದೆ. ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ ಪ್ರಮಾಣದಲ್ಲಿ ಆರಂಭವಾಗುವ ಮುನ್ನ ಆಯೋಗ ಸ್ಪಷ್ಟನೆ ನೀಡಲಿದೆ ಎಂಬ ನಿರೀಕ್ಷೆಯಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ, ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!

"ಭಾರತದ ಜಲ ಬಾಂಬ್‌ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!

JDS ನಲ್ಲಿ ಇರೋದೆ 18 ಶಾಸಕರು, ಅವರಿಗೆ 70-80 ಕ್ಷೇತ್ರ ಬೇಕಂತೆ! ಸ್ವರೂಪ್ ರಾಜಕೀಯಕ್ಕೆ ಹೊಸಬ- ಪ್ರತಿದಿನ 'ಲಾಟರಿ' ಹೊಡೆಯಲ್ಲ; ಪ್ರೀತಂಗೌಡ

BJP vs BJP: ಮುತ್ತಪ್ಪ ರೈ ಕೈಕೆಳಗೆ ಲೂಟಿ ಹೊಡೆಯುತ್ತಿದ್ದ ವ್ಯಕ್ತಿಗೆ ದುಡ್ಡಿನ ಅಮಲು; ವಿಶ್ವನಾಥ್ ವಿರುದ್ಧ ಡಿವಿಎಸ್ ವಾಗ್ದಾಳಿ

ಡೀಸೆಲ್ ಖರೀದಿಗೆ ಇನ್ನು ಮಿತಿ ಇಲ್ಲ: ಜು.1ರಿಂದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಮುಕ್ತ ಮಾರಾಟ..!