ಮೃತ ಪಿಎಸ್ಐ ನಾಸೀರ್ ಹುಸೇನ್. 
ರಾಜ್ಯ

ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಠಾಣಾಧಿಕಾರಿ ನಿಧನ

ನಾಸೀರ್ ಹುಸೇನ್ ಅವರು ಚಿಕ್ಕಮಗಳೂರು ಜಿಲ್ಲೆ ಮೂಲದವರಾಗಿದ್ದು, ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ಉಡುಪಿ “ಜಿಲ್ಲಾ ಪೊಲೀಸ್ – ನಮ್ಮ ಪೋಲೀಸ್ ನಮ್ಮ ಹೆಮ್ಮೆ”, “ಎಲ್ಲರಿಗೂ ಫಿಟ್ನಸ್”, “ಡ್ರಗ್ಸ್ ಫ್ರೀ ಕರ್ನಾಟಕ” ಎಂಬ ಧ್ಯೇಯದೊಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ಹುಸೇನ್ 5 ಕಿಮೀ ಮ್ಯಾರಥಾನ್ ಓಟವನ್ನು ಆಯೋಜಿಸಿತ್ತು.

ಮ್ಯಾರಥಾನ್ ನಲ್ಲಿ ಭಾಗವಿಸಿದ್ದ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ (58) ಅವರು ಮೃತಪಟ್ಟಿದ್ದಾರೆ.

ನಾಸೀರ್ ಹುಸೇನ್ ಅವರು ಚಿಕ್ಕಮಗಳೂರು ಜಿಲ್ಲೆ ಮೂಲದವರಾಗಿದ್ದು, ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಜಿಲ್ಲಾ ಪೊಲೀಸ್ ಇಲಾಖೆಯಿಂದ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿದ್ದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ನಾಸೀರ್ ಹುಸೇನ್ ಅವರು, ಜೋಡುಕಟ್ಟೆಯ ಟಿ.ಎಂ.ಎ. ಪೈ ಆಸ್ಪತ್ರೆ ಎದುರು ಏಕಾಏಕಿ ಕುಸಿದು ಬಿದ್ದರು.

ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ನಾಸಿರ್ ಹುಸೇನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದರು. ಇತ್ತೀಚೆಗೆ ಶೆಟ್ಟಿಕಟ್ಟೆ ಅಪಘಾತ ನಡೆದಾಗ ಅಧಿಕಾರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕುಂದಾಪುರ ಗ್ರಾಮಾಂತರ ಠಾಣೆಗೆ ಬಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!