ಎಚ್ ಡಿ ಕುಮಾರಸ್ವಾಮಿ  
ರಾಜ್ಯ

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.

ಮೈಸೂರು: ಗಲ್ಫ್ ಪ್ರದೇಶದ ಸಂಘರ್ಷಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ವಾಪಸು ಕರೆತರುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಯುದ್ಧ ಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ವಾಪಸು ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.

ಅದೇ ರೀತಿ ಈ ಬಾರಿಯೂ ಜನರನ್ನು ಸುರಕ್ಷಿತವಾಗಿ ವಾಪಸು ಕರೆತರಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಪ್ರಧಾನಮಂತ್ರಿಗಳು ಈಗಾಗಲೇ ಅಗತ್ಯ ಕ್ರಮಗಳನ್ನು ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.

ಯುದ್ಧಸಮಾನ ಪರಿಸ್ಥಿತಿ ಎದುರಿಸುತ್ತಿರುವ ರಾಷ್ಟ್ರಗಳಲ್ಲಿ, ವಿಶೇಷವಾಗಿ ದುಬೈ ಸೇರಿದಂತೆ ಹಲವು ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ನಾನು ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ. ಅವರೆಲ್ಲರೂ ಸುರಕ್ಷಿತರಾಗಿದ್ದಾರೆ. ಆತಂಕಪಡುವ ಅಗತ್ಯವಿಲ್ಲ. ಅವರನ್ನು ಸುರಕ್ಷಿತವಾಗಿ ವಾಪಸು ಕರೆತರಲಾಗುತ್ತದೆ ಎಂದು ಆತಂಕದಲ್ಲಿರುವ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್