ಖಮೇನಿ, ನೆತನ್ಯಾಹು ಮತ್ತು ನರೇಂದ್ರ ಮೋದಿ 
ರಾಜ್ಯ

ಭಾರತದ ರಾಜತಾಂತ್ರಿಕ ವ್ಯವಸ್ಥೆ ದಿವಾಳಿಯಾಗಿದೆ: ಖಮೇನಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಿಲ್ಲ ಏಕೆ?

ಖಮೇನಿ ಹತ್ಯೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿಲ್ಲ. ಇದು ಭಾರತದ ರಾಜತಾಂತ್ರಿಕ ವ್ಯವಸ್ಥೆ ದಿವಾಳಿಯಾಗಿದೆ ಎಂಬುವುದನ್ನು ತೋರಿಸುತ್ತಿದೆ. ಸಕ್ರಿಯವಾದ ನೀತಿ ಅಲಿಪ್ತ ಕೂಟದಲ್ಲಿ ಇತ್ತು.

ಬೆಂಗಳೂರು: ಇರಾನ್ ದೇಶದ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿಲ್ಲ ಏಕೆ? ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೆಹರು ಮಾಡಿದ ವಿದೇಶಾಂಗ ನೀತಿಯಲ್ಲಿ ಭಾರತ ತಟಸ್ಥ ನಿಲುವು ಅನುಸರಿಸುತ್ತಾ ಬಂದಿದೆ. ಅಲಿಪ್ತ ರಾಷ್ಟ್ರಗಳ ಕೂಟ ಪ್ರಾರಂಭ ಮಾಡಲಾಗಿತ್ತು. ಇದೀಗ ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿ ಖಮೇನಿಯನ್ನು ಮೋಸದಿಂದ ಹತ್ಯೆ ಮಾಡಲಾಗಿದೆ. ಮಾತುಕತೆಯ ಸಂದರ್ಭದಲ್ಲಿ ಈ ಹತ್ಯೆ ನಡೆದಿದೆ. ಈ ಮೂಲಕ ವಿಶ್ವಸಂಸ್ಥೆಯ ನೀತಿಗಳನ್ನು ನಾಶಮಾಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.

ಇದು ವಿಶ್ವಸಂಸ್ಥೆಯ ಚಾರ್ಟರ್‌ನ ಸಂಪೂರ್ಣ ಉಲ್ಲಂಘನೆಯಾಗಿದ್ದು, ಒಂದು ರಾಷ್ಟ್ರದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ನಾಶಪಡಿಸುವ ಕೆಲಸವನ್ನು ಯುಎಸ್‌ಎ ಮತ್ತು ಇಸ್ರೇಲ್ ಮಾಡಿವೆ ಎಂದು ಅವರು ಹೇಳಿದ್ದಾರೆ.

ಖಮೇನಿ ಹತ್ಯೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿಲ್ಲ. ಇದು ಭಾರತದ ರಾಜತಾಂತ್ರಿಕ ವ್ಯವಸ್ಥೆ ದಿವಾಳಿಯಾಗಿದೆ ಎಂಬುವುದನ್ನು ತೋರಿಸುತ್ತಿದೆ. ಸಕ್ರಿಯವಾದ ನೀತಿ ಅಲಿಪ್ತ ಕೂಟದಲ್ಲಿ ಇತ್ತು. ಅದಕ್ಕೆ ತಿಲಾಂಜಲಿಯನ್ನು ನಮ್ಮ ವಿಶ್ವಗುರು ಮಾಡಿದ್ದಾರೆ. ಮೋದಿ ಅವರನ್ನು ಅಮೆರಿಕ, ಇಸ್ರೇಲ್ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪ ಮಾಡಿದರು.

ಇರಾನ್ ಭಾರತದ ಮಿತ್ರ ರಾಷ್ಟವಾಗಿತ್ತು. ಈ ಹಿಂದೆ ಕಾಶ್ಮೀರದ ವಿಚಾರವಾಗಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ಇಸ್ಲಾಮಿಕ್ ದೇಶಗಳು ಭಾರತದ ವಿರುದ್ಧ ನಿರ್ಣಯ ಮಾಡಿದ್ದವು . ಅದರೆ ಇರಾನ್ ಭಾರತ ದೇಶಕ್ಕೆ ಬೆಂಬಲ ನೀಡಿತ್ತು. ವಾಜಪೇಯಿ ಸರ್ಕಾರದ ಅವಧಿಯಲ್ಲಿ ಭಾರತ ಇರಾನ್ ಗೆ ಬೆಂಬಲ ನೀಡಿತ್ತು ಎಂದು ವಿವರಿಸಿದರು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೊಡ್ಡ ಕೊಲೆಗಡುಕ ಅಮೆರಿಕಾ ಇಸ್ರೇಲ್ ಯಾವ ಸಂದರ್ಭದಲ್ಲಿ ಏನು ಮಾಡಬಹುದು ಗೊತ್ತಾಗುತ್ತಿಲ್ಲ. ಮುಂದೆ ಅವರು ಯಾವ ಸರ್ಕಾರವನ್ನು ಬುಡಮೇಲು ಮಾಡಬಹುದು. ನೆತನ್ಯಾಹು ದೊಡ್ಡ ಕೊಲೆಗಡುಕ ಎಂದು ಬಿಕೆ ಹರಿಪ್ರಸಾದ್ ಕಿಡಿಕಾರಿದರು.

ಇಸ್ರೇಲ್ ಭೇಟಿ ನೀಡಿದ್ದ ಕಾರಣ ಏನು ಎಂಬುದನ್ನು ಪ್ರಧಾನಿ ಮೋದಿ ಹೇಳಬೇಕಾಗುತ್ತದೆ. ಪ್ರಧಾನಿ ಮೋದಿ ಅವರಿಗೆ ಮಣಿಪುರದಲ್ಲಿ ನಡೆದದ್ದೂ ಗಮನಕ್ಕೆ ಬಂದಿಲ್ಲ. ಇವರನ್ನು ನೋಡಿದರೆ ಇವರ ವಿದೇಶಾಂಗ ನೀತಿ ಎಫ್ಟಿನ್ ಫೈಲ್ ನಲ್ಲಿ ಸಿಕ್ಕಿ ಹಾಕಿಕೊಂಡಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ನಡುವೆ ಮುಂದುವರೆದ ಶಾಂತಿ ಪ್ರಯತ್ನ: ಪಾಕ್'ನಲ್ಲಿ 2ನೇ ಸುತ್ತಿನ ಸಂಧಾನ ಸಭೆ, ವ್ಯಾನ್ಸ್ ಬದಲು ವಿಟ್ಕಾಫ್, ಕುಶ್ನರ್‌ಗೆ ಜವಾಬ್ದಾರಿ..!

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

SCROLL FOR NEXT