ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ CCB ಭರ್ಜರಿ ಕಾರ್ಯಾಚರಣೆ: 10 ಕೋಟಿ ರೂ ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ

ಸಾಮಾಜಿಕ ಜಾಲತಾಣಗಳ ನಿಗಾದ ವೇಳೆ ಡ್ರಗ್ ಪೆಡ್ಲಿಂಗ್ ಕುರಿತು ಸುಳಿವು ದೊರೆತಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಿ 8,335 ಎಲ್‌ಎಸ್‌ಡಿ ಸ್ಟ್ರಿಪ್‌ಗಳು (124 ಗ್ರಾಂ), 5 ಕೆಜಿ ಹೈಡ್ರೋ ಗಾಂಜಾ ಮತ್ತು 534 ಗ್ರಾಂ ಚರಸ್ ಜಪ್ತಿ ಮಾಡಲಾಗಿದೆ.

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ವಸ್ತು ವಿರೋಧಿ ವಿಭಾಗದ ಅಧಿಕಾರಿಗಳು ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡಸಿದ್ದು, 10 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಕಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧನಕ್ಕೊಳಪಡಿಸಿದೆ.

ಬಂಧಿತರನ್ನು ಶ್ವಿನ್ (27) ಮತ್ತು ಮುಬೀನಾ (25) ಎಂದು ಗುರ್ತಿಸಲಾಗಿದೆ. ಇಬ್ಬರೂ ಕೇರಳ ಮೂಲದವರಾಗಿದ್ದು, ಪ್ರೆಸ್ಟೀಜ್ ಪ್ಯಾನ್ಸ್‌ಬೆರಿ ಹೈಟ್ಸ್ ಅಪಾರ್ಟ್‌ಮೆಂಟ್'ನಲ್ಲಿ ವಾಸಿಸುತ್ತಿದ್ದರು.

ಇಬ್ಬರೂ ಬಿಬಿಎ ಪದವಿ ಕೋರ್ಸ್'ನ್ನು ಮಧ್ಯದಲ್ಲೇ ಬಿಟ್ಟಿದ್ದು, ಬಳಿಕ ಮಾದಕ ವಸ್ತು ವಿತರಣೆ ಜಾಲದಲ್ಲಿ ತೊಡಗಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಾಮಾಜಿಕ ಜಾಲತಾಣಗಳ ನಿಗಾದ ವೇಳೆ ಡ್ರಗ್ ಪೆಡ್ಲಿಂಗ್ ಕುರಿತು ಸುಳಿವು ದೊರೆತಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಿ 8,335 ಎಲ್‌ಎಸ್‌ಡಿ ಸ್ಟ್ರಿಪ್‌ಗಳು (124 ಗ್ರಾಂ), 5 ಕೆಜಿ ಹೈಡ್ರೋ ಗಾಂಜಾ ಮತ್ತು 534 ಗ್ರಾಂ ಚರಸ್ ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಕೇರಳ ಮೂಲದ ವಿನ್ಸೆಂಟ್ ಎಂಬ ವ್ಯಕ್ತಿ ಥಾಯ್ಲೆಂಡ್‌ನಲ್ಲಿ ನೆಲೆಸಿದ್ದು, ಅವನಿಂದಲೇ ಈ ಮಾದಕ ವಸ್ತುಗಳು ಬಂದಿದ್ದು, ಅವನ ಸೂಚನೆ ಮೇರೆಗೆ ಆರೋಪಿಗಳು ವಿತರಣೆ ಮಾಡುತ್ತಿದ್ದರು.

ಬಾಗಲೂರು ಪ್ರದೇಶದಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳು ಇರುವ ಹಿನ್ನೆಲೆ, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಆಗುತ್ತಿದ್ದದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಇವುಗಳನ್ನು ಖರೀದಿ ಮಾಡುತ್ತಿದ್ದ ಗ್ರಾಹಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಒಂದೇ ಕಾರ್ಯಾಚರಣೆಯಲ್ಲಿ ಅತಿ ಹೆಚ್ಚು ಎಲ್‌ಎಸ್‌ಡಿ ಸ್ಟ್ರಿಪ್‌ಗಳನ್ನು ಜಪ್ತಿ ಮಾಡಿದ ಘಟನೆ ಇದಾಗಿದ್ದು, ಪ್ರತಿ ಸ್ಟ್ರಿಪ್ ಅನ್ನು ರೂ.3,000ಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

SCROLL FOR NEXT