ಅಕ್ಕಿ (ಸಂಗ್ರಹ ಚಿತ್ರ) 
ರಾಜ್ಯ

ಪಡಿತರ ಅಕ್ಕಿ ಅಕ್ರಮ ಸಾಗಾಟ: ಬಳ್ಳಾರಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 2 ತಿಂಗಳಲ್ಲಿ 50ಕ್ಕೂ ಹೆಚ್ಚು ಮಂದಿ ಬಂಧನ

ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ, ಆರೋಪಿಗಳು ಈ ಅಕ್ಕಿಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಾಗಿಸುತ್ತಿದ್ದರು.

ಬಳ್ಳಾರಿ: ಸಾರ್ವಜನಿಕ ವಿತರಣೆ ವ್ಯವಸ್ಥೆ (PDS) ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಪೊಲೀಸರು, ಕಳೆದ ಎರಡು ತಿಂಗಳಲ್ಲಿ 50ಕ್ಕೂ ಹೆಚ್ಚು ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ,

ಸರ್ಕಾರದ ಕಲ್ಯಾಣ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಧಾನ್ಯಗಳನ್ನು ಅಕ್ರಮವಾಗಿ ಬೇರೆಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಬಳ್ಳಾರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ವಿವಿಧ ದಾಳಿಗಳ ವೇಳೆ ಸುಮಾರು 5 ಟನ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ, ಆರೋಪಿಗಳು ಈ ಅಕ್ಕಿಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಾಗಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪಡಿತರಅಕ್ಕಿ ಅಕ್ರಮ ಸಾಗಣೆ ಗಂಭೀರ ಅಪರಾಧವಾಗಿದೆ. ಇಂತಹ ಅಕ್ರಮಗಳು ಆರ್ಥಿಕವಾಗಿ ದುರ್ಬಲ ವರ್ಗಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಬಂಧನ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಅಕ್ರಮದಲ್ಲಿ ಸಂಘಟಿತ ಜಾಲದ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಹಣಕಾಸು ವ್ಯವಹಾರಗಳು ಮತ್ತು ಸರಬರಾಜು ಸರಪಳಿಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕರು ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆಯಿಂದಿದ್ದು, ಯಾವುದೇ ಮಾಹಿತಿ ಇದ್ದರೆ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಲು ಅಧಿಕಾರಿಗಳು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

ಸಿಎಂ ಕುರ್ಚಿ ಕದನ ಮಧ್ಯೆ ಡಿಕೆಶಿಯಿಂದ ಮಾ.10ಕ್ಕೆ ಡಿನ್ನರ್ ಪಾರ್ಟಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಸಿಎಂ?

SCROLL FOR NEXT