Supreme Leader Ayatollah Ali Khamenei 
ರಾಜ್ಯ

ಪುಲ್ವಾಮಾ ದಾಳಿಯಲ್ಲಿ ಮೌನತಾಳಿದ್ದವರು, ಖಮೆನೀ ಹತ್ಯೆ ವಿಚಾರದಲ್ಲಿ ಧ್ವನಿ ಎತ್ತುತ್ತಿರುವುದೇಕೆ: ಪ್ರಶ್ನೆ ಮಾಡಿದ ಯುವಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ

ಪೂಲ್ವಾಮಾ ದಾಳಿಯ ವೇಳೆ ಮೌನವಾಗಿದ್ದವರು, ಇಂದು ಖಮೆನೀ ಹತ್ಯೆ ವಿಚಾರದಲ್ಲಿ ಮಾತ್ರ ಧ್ವನಿ ಎತ್ತುತ್ತಿದ್ದಾರೆಂದು ಪ್ರಶ್ನಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಗಂಗಾವತಿ (ಕೊಪ್ಪಳ): ಇರಾನ್‌ ಸುಪ್ರೀಂ ನಾಯಕ ಆಯತೊಲ್ಲಾ ಅಲಿ ಖಮೆನೀ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆ ಯುವಕನೋರ್ವನ ಮೇಲೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಂಗಳವಾರ ನಡೆದಿದೆ.

ಗಾಯಗೊಂಡ ಯುವಕನನ್ನು ಗಂಗಾವತಿ ನಿವಾಸಿ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಯುವಕ ಡ್ರೈಫ್ರೂಟ್ಸ್ ವ್ಯಾಪಾರಿಯಾಗಿದ್ದು, ಪೂಲ್ವಾಮಾ ದಾಳಿಯ ವೇಳೆ ಮೌನವಾಗಿದ್ದವರು, ಇಂದು ಖಮೆನೀ ಹತ್ಯೆ ವಿಚಾರದಲ್ಲಿ ಮಾತ್ರ ಧ್ವನಿ ಎತ್ತುತ್ತಿದ್ದಾರೆಂದು ಪ್ರಶ್ನಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಇದರ ಬೆನ್ನಲ್ಲೇ ಗಂಗಾವತಿಯಲ್ಲಿರುವ ಯುವಕನ ಅಂಗಡಿ ಬಳಿ ಬಂದಿರುವ ನಾಲ್ವರು ಪುಂಡರು ಯುವಕನಮೇಲೆ ಹಲ್ಲೆ ನಡೆಸಿ, ಇಂತಹ ಪೋಸ್ಟ್‌ಗಳನ್ನು ಮುಂದುವರೆಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಗಂಗಾವತಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಮಂಗಳವಾರ ನಾನು ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ನಾಲ್ವರು ಬಂದು ನನ್ನ ಮೇಲೆ ಹಲ್ಲೆ ನಡೆಸಿದರು. ನೀವು ನಮ್ಮ ಸಮುದಾಯದ ಬಗ್ಗೆ ಏಕೆ ಪೋಸ್ಟ್ ಮಾಡಿದ್ದೀರಿ ಎಂದು ಪ್ರಶ್ನಿಸಿ, ಪೋಸ್ಟ್ ಮುಂದುವರೆಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

ಈ ಘಟನೆ ಕುರಿತು ಮಾಹಿತಿ ಸಂಗ್ರಹಿಸಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಕೊಪ್ಪಳ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

ಸಿಎಂ ಕುರ್ಚಿ ಕದನ ಮಧ್ಯೆ ಡಿಕೆಶಿಯಿಂದ ಮಾ.10ಕ್ಕೆ ಡಿನ್ನರ್ ಪಾರ್ಟಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಸಿಎಂ?

SCROLL FOR NEXT