ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

2026-27ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಮಂಡನೆ

ರಾಜ್ಯ ಸರ್ಕಾರo ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 4.48 ಸಾವಿರ ಕೋಟಿ ರೂ. ಎಂದು ತಿಳಿಸಿದರು.

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯದ ಆಯವ್ಯಯ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಹೇಳಿದರು.

ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ ರೂ. ತೆರಿಗೆ ಹೆಚ್ಚಳ. 2026-2027ನೇ ಸಾಲಿನಲ್ಲಿ 3.15 ಲಕ್ಷ ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ. ಈ ಸಾಲಿನ ಬಜೆಟ್‌ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. 27,957 ಕೋಟಿ ರೂಪಾಯಿ ರಾಜಸ್ವ ಕೊರತೆ ಬಜೆಟ್‌ ಇದಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಬಜೆಟ್ 2026: 'ವೈಟ್ ಟಾಪಿಂಗ್‌, ಮಳೆ ಪ್ರವಾಹ ನಿರ್ವಹಣೆ..'; ಬೆಂಗಳೂರಿಗೆ ಮಹತ್ವದ ಘೋಷಣೆಗಳು

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

ನುಂಗಮಬಕ್ಕಂ ಹೋಟಲ್‌ನಲ್ಲಿ ನಟ ವಿಜಯ್-ತ್ರಿಷಾ ಒಟ್ಟಿಗೆ ಇದ್ದಿದ್ದನ್ನು ನೋಡಿದ್ದೇನೆ, Video Viral!

T20 ವಿಶ್ವಕಪ್ 2026: 'ಸಂಜು ಬ್ಯಾಟಿಂಗ್, ಬುಮ್ರಾ ಬೌಲಿಂಗ್, ಅಕ್ಸರ್ ಅದ್ಭುತ ಫೀಲ್ಡಿಂಗ್..'; ಭಾರತದ ಗೆಲುವಿಗೆ ಕಾರಣವಾದ ಅಂಶಗಳು!

Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ: ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ

SCROLL FOR NEXT