ಮೈಸೂರು ಅರಮನೆ  
ರಾಜ್ಯ

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ವೇಳೆ ಸಿದ್ದರಾಮಯ್ಯ ಅವರು ಮಾತನಾಡಿ, ಈಗಾಗಲೇ ನಿರಂತರವಾಗಿ ಬೆಳವಣಿಗೆ ಕಾಣುತ್ತಿರುವ ಮೈಸೂರಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರವನ್ನು ಸರ್ಕಾರ ಮತ್ತಷ್ಟು ಬಲಪಡಿಸುವುದಾಗಿ ಹೇಳಿದರು.

ಕರ್ನಾಟಕ ರಾಜಧಾನಿ ಬೆಂಗಳೂರು ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ರಾಜಧಾನಿಯ ಹೊರಗಡೆ ಆರ್ಥಿಕ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಮೈಸೂರು ನಗರವನ್ನು ರಾಜ್ಯದ ಎರಡನೇ ಪ್ರಮುಖ ಐಟಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ವೇಳೆ ಸಿದ್ದರಾಮಯ್ಯ ಅವರು ಮಾತನಾಡಿ, ಈಗಾಗಲೇ ನಿರಂತರವಾಗಿ ಬೆಳವಣಿಗೆ ಕಾಣುತ್ತಿರುವ ಮೈಸೂರಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರವನ್ನು ಸರ್ಕಾರ ಮತ್ತಷ್ಟು ಬಲಪಡಿಸುವುದಾಗಿ ಹೇಳಿದರು.

“ಐಟಿ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಬೆಂಬಲದಿಂದ ಮೈಸೂರಿನಲ್ಲಿ ಈಗ ಸುಮಾರು 100 ಕಂಪನಿಗಳಲ್ಲಿ 30,000ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿನ ಸಂಚಾರ ದಟ್ಟಣೆ ಮತ್ತು ಒತ್ತಡವನ್ನು ಕಡಿಮೆ ಮಾಡುವ ಜೊತೆಗೆ ರಾಜಧಾನಿಯ ಹೊರಗಿನ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ ಮೈಸೂರನ್ನು ರಾಜ್ಯದ ಎರಡನೇ ಐಟಿ ನಗರವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.

ರಾಜ್ಯದ ಇತರ ನಗರಗಳಲ್ಲಿ ಹೊಸ ತಂತ್ರಜ್ಞಾನ ಕೇಂದ್ರಗಳನ್ನು ಬೆಳೆಸಲು ಹಾಗೂ ತಂತ್ರಜ್ಞಾನ ಹೂಡಿಕೆಗಳನ್ನು ವಿಕೇಂದ್ರೀಕರಿಸಲು ಸರ್ಕಾರ ಕೈಗೊಂಡಿರುವ ವ್ಯಾಪಕ ಯೋಜನೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಸಿದ್ದರಾಮಯ್ಯ ಅವರು ಜಾಗತಿಕ ಸಾಮರ್ಥ್ಯದ ಕೇಂದ್ರಗಳ (GCC) ಕುರಿತು ರಾಜ್ಯದ ಗಮನವನ್ನು ಕೂಡ ಪ್ರಸ್ತಾಪಿಸಿದರು. ಈ ಕ್ಷೇತ್ರಕ್ಕಾಗಿ ವಿಶೇಷ ನೀತಿಯನ್ನು ಜಾರಿಗೆ ತಂದ ಭಾರತದ ಮೊದಲ ರಾಜ್ಯ ಕರ್ನಾಟಕ ಎಂದರು.

ರಾಜ್ಯದ GCC ನೀತಿಯಡಿ ಪ್ರಸ್ತುತ ಕರ್ನಾಟಕದಲ್ಲಿ 550ಕ್ಕೂ ಹೆಚ್ಚು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರವು 2029ರೊಳಗೆ 500 ಹೊಸ GCCಗಳನ್ನು ಸ್ಥಾಪಿಸುವ ಗುರಿ ಹೊಂದಿದೆ. GCCಗಳ ವಿಸ್ತರಣೆ ಮುಂದಿನ ಕೆಲವು ವರ್ಷಗಳಲ್ಲಿ ಸುಮಾರು 3.5 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಸುಮಾರು 50 ಬಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕ ಉತ್ಪಾದನೆಯನ್ನು ಉಂಟುಮಾಡಲಿದೆ.

ಈ ಕ್ಷೇತ್ರವನ್ನು ಇನ್ನಷ್ಟು ಉತ್ತೇಜಿಸಲು, ಕರ್ನಾಟಕ ಸ್ಟೇಟ್ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (KEONICS) ಮೂಲಕ ಮಂಗಳೂರು ನಗರದಲ್ಲಿ ಹೊಸ ಐಟಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತದೆ, ಇದು ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್‌ಗಳನ್ನು ಆಕರ್ಷಿಸುವುದಕ್ಕೆ ಒತ್ತು ನೀಡಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

SCROLL FOR NEXT