ಹಲ್ಲೆಗೊಳಗಾಗಿರುವ ವಿದ್ಯಾರ್ಥಿಗಳು 
ರಾಜ್ಯ

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ

ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಬಳ್ಳಾರಿ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ನಡೆದಿದೆ.

ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಇವರೆಲ್ಲರೂ 9ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಬಾಲಕನ ಈ ಹುಚ್ಚಾಟದಿಂದಾಗಿ 8 ಬಾಲಕರಿಗೆ ಗಂಭೀರ ಗಾಯಗೊಂಡಿದ್ದು, ಬಳ್ಳಾರಿ ಬಿಮ್ಸ್ ಮತ್ತು ಟ್ರಾಮ‌ಕೇರ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಇದೀಗ ಬಾಲಕನೋರ್ವ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಹಾಸ್ಟೆಲ್‌ನ ವಾರ್ಡನ್‌ ಮೇಲೂ ಬಾಲಕ ಹಲ್ಲೆ ಮಾಡಿದ್ದು ,ಹಲ್ಲೆಯ ಬಳಿಕ ಆತ ಓಡಿ ಹೋಗಿದ್ದಾನೆ ಎನ್ನಲಾಗಿದೆ.

ತಡರಾತ್ರಿ ಈ ಘಟನೆ ನಡೆದಿದ್ದು, ಮಕ್ಕಳ ಪೋಷಕರನ್ನು ಈ ಘಟನೆ ಬೆಚ್ಚಿ ಬೀಳಿಸಿದೆ. ತಡಿಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನ್ಮಸಿದ್ಧ ಪೌರತ್ವ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಟ್ರಂಪ್‌ಗೆ ಭಾರೀ ಶಾಕ್, 'ದೇಶಕ್ಕೆ ಮಾರಕ' ಎಂದ ಅಮೆರಿಕ ಅಧ್ಯಕ್ಷ..!

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?

ಜನ್ಮಸಿದ್ಧ ಪೌರತ್ವ ವಿವಾದ: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಚೀನಾಗೆ ಅಭಿನಂದನೆ ತಿಳಿಸಿದ ಟ್ರಂಪ್, ಕಾರಣ..?

ಮಂಗಳೂರಿನಲ್ಲಿ ಭಾರೀ ಮಳೆಗೆ ಭೂಕುಸಿತ: ಮನೆಯ ಮೇಲೆ ಮಣ್ಣು ಕುಸಿದು ತಾಯಿ-ಮಕ್ಕಳು ಸೇರಿ ಮೂವರ ದುರ್ಮರಣ..!

ರಾಜಸ್ಥಾನದಲ್ಲಿ ಭೀಕರ ರಸ್ತೆ ದುರಂತ: Delhi-Mumbai ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 7 ಮಂದಿ ಸಜೀವ ದಹನ, 15 ಜನರಿಗೆ ಗಾಯ