ಸಚಿವ ಪ್ರಿಯಾಂಕ್ ಖರ್ಗೆ online desk
ರಾಜ್ಯ

DPR ಬಂದರೆ ಕಲಬುರಗಿಯಲ್ಲಿ Millet Hub ಸ್ಥಾಪನೆಗೆ ಸರ್ವ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪನೆಗೆ ಕೃಷಿ ಇಲಾಖೆ ಸಮಗ್ರ ಯೋಜನಾ ವರದಿ (DPR) ಹಾಗೂ ಬ್ಲೂಪ್ರಿಂಟ್ ಸಿದ್ಧಪಡಿಸಿ ಸಲ್ಲಿಸಿದರೆ, ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತದೆ.

ಕಲಬುರಗಿ: ರಾಜ್ಯ ಸರ್ಕಾರ ಘೋಷಿಸಿರುವ ಮಿಲೆಟ್ ಹಬ್ ಯಾವ ಸ್ಥಳದಲ್ಲಿ ಸ್ಥಾಪನೆಗೊಳ್ಳಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರು ಶನಿವಾರ ಹೇಳಿದರು.

ಜಿಲ್ಲಾ ಮಟ್ಟದ ‘ಸಿರಿ ಧಾನ್ಯ ಮೇಳ–2026’ ಉದ್ಘಾಟನೆ ಹಾಗೂ ಬೆಳೆ ವಿಮೆ ಯೋಜನೆಯಡಿ ನೇರ ಹಣ ವರ್ಗಾವಣೆ (DBT) ಮೂಲಕ ಜಿಲ್ಲೆಯ 2.90 ಲಕ್ಷ ರೈತರಿಗೆ ಮಧ್ಯಂತರ ಪರಿಹಾರ ಹಣ ಬಿಡುಗಡೆ ಮಾಡಿದ ಬಳಿಕ ಸಚಿವರು ಮಾತನಾಡಿದರು.

ಕಲಬುರಗಿ ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪನೆಗೆ ಕೃಷಿ ಇಲಾಖೆ ಸಮಗ್ರ ಯೋಜನಾ ವರದಿ (DPR) ಹಾಗೂ ಬ್ಲೂಪ್ರಿಂಟ್ ಸಿದ್ಧಪಡಿಸಿ ಸಲ್ಲಿಸಿದರೆ, ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತದೆ ಎಂದು ಹೇಳಿದರು.

‘ಸಿರಿ ಧಾನ್ಯ’ ಯೋಜನೆಯ ಉದ್ದೇಶವು ಸಿರಿಧಾನ್ಯಗಳ ಬಳಕೆಯನ್ನು ಉತ್ತೇಜಿಸುವುದು. ‘ಕಲಬುರಗಿ ರೊಟ್ಟಿ’ಗೆ ನೀಡಿರುವ ಬ್ರ್ಯಾಂಡ್‌ನಂತೆ, ಸಿರಿಧಾನ್ಯಗಳಿಗೆ ಡಿಜಿಟಲ್ ಮಾರುಕಟ್ಟೆ ವೇದಿಕೆ ನಿರ್ಮಿಸುವ ಮೂಲಕ ಅವುಗಳಿಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ರೂ.4.45 ಕೋಟಿ ವೆಚ್ಚದಲ್ಲಿ ‘ಕಸ್ಟಮರ್ ಹೈರ್ ಸರ್ವೀಸ್ ಸೆಂಟರ್’ಗಳನ್ನು ಸ್ಥಾಪಿಸಿ, ಕೃಷಿ ಯಂತ್ರೋಪಕರಣಗಳನ್ನು ಕಡಿಮೆ ದರದಲ್ಲಿ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ರೂ.1.97 ಕೋಟಿ ವೆಚ್ಚದಲ್ಲಿ ನಾಲ್ಕು ಡ್ರೋನ್ ಸ್ಪ್ರೇಯಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಚಿತ್ತಾಪುರದಲ್ಲಿ ರೂ.10 ಕೋಟಿ ವೆಚ್ಚದಲ್ಲಿ ಕೂಲಿಂಗ್ ಯುನಿಟ್ ಸ್ಥಾಪಿಸಲಾಗಿದೆ. ರೈತರ ಬೇಡಿಕೆ ಹಿನ್ನೆಲೆಯಲ್ಲಿ ಇದೇ ಮಾದರಿಯಲ್ಲಿ ಈ ವರ್ಷ ಕಲಬುರಗಿಯಲ್ಲಿ ತರಕಾರಿ ಹಾಗೂ ಟೊಮೆಟೊ ಸಂಗ್ರಹಿಸಲು ಕೋಲ್ಡ್ ಸ್ಟೋರೇಜ್ ಘಟಕವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಇದರ ಜೊತೆಗೆ ರೂ.7.58 ಕೋಟಿ ವೆಚ್ಚದಲ್ಲಿ ಏಳು ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯನ್ನೇ ಕೃಷಿ ಕೇಂದ್ರವಾಗಿಸಲು ಈ ಎಲ್ಲ ಯೋಜನೆಗಳನ್ನು ಪ್ರಾಯೋಗಿಕ ಆಧಾರದಲ್ಲಿ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ 3.01 ಲಕ್ಷ ರೈತರು ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ಭಾರೀ ಮಳೆಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ರೂ.243.52 ಕೋಟಿ ಮಧ್ಯಂತರ ಪರಿಹಾರ ನೀಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಬೆಳೆ ರೋಗ ಪರಿಹಾರ, ಬೆಳೆ ನಷ್ಟ ಪರಿಹಾರ, ಬರ ಪರಿಹಾರ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಸರ್ಕಾರ ರೈತರಿಗೆ ನೆರವು ನೀಡಿದೆ. ಜೊತೆಗೆ 15.47 ಲಕ್ಷ ರೈತರಿಗೆ ರೂ.2,590 ಕೋಟಿ ಕಬ್ಬು ಪರಿಹಾರ ಹಣ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಳಂದ ಶಾಸಕ ಬಿ.ಆರ್. ಪಾಟೀಲ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

ಕೇಂದ್ರ ಪಡೆಗಳಿಂದ ಮತದಾರರ ಮೇಲೆ ಹಲ್ಲೆ; ವೃದ್ಧ ಸಾವು- ಅಭಿಷೇಕ್ ಬ್ಯಾನರ್ಜಿ ಆರೋಪ

Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!

SCROLL FOR NEXT