ಪ್ರಿಯಾಂಕ್ ಖರ್ಗೆ 
ರಾಜ್ಯ

ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಯೋಜನೆಗೆ ಅನುದಾನ ನೀಡುತ್ತಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರ ಆಯ್ಕೆ ಮಾಡಿದ 293 ರಸ್ತೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಳಂಬವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರು: ಪ್ರಗತಿ ಪಥ ಯೋಜನೆಯಡಿ ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿಯನ್ನು ಸಂಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯೋಜನೆಗೆ ಅನುದಾನ ನೀಡುತ್ತಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರ ಆಯ್ಕೆ ಮಾಡಿದ 293 ರಸ್ತೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಳಂಬವಾಗಿದೆ ಎಂದರು.

ಈ ಯೋಜನೆಯಡಿ ಸುಮಾರು 5,180 ಕೋಟಿ ವೆಚ್ಚದಲ್ಲಿ 7,110 ಕಿಲೋಮೀಟರ್‌ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನಿಂದ 3,242 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 1,443 ಕೋಟಿ ಹಣಕಾಸು ಒದಗಿಸಲಾಗುತ್ತಿದೆ. ಇದಲ್ಲದೇ ನಿರ್ವಹಣೆಗಾಗಿ 504 ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದರು.

ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,356 ರಸ್ತೆಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ 293 ರಸ್ತೆಗಳಿಗೆ ಎಡಿಬಿ ಆಕ್ಷೇಪ ವ್ಯಕ್ತಪಡಿಸಿದೆ.

ಪರಿಸರ-ಸೂಕ್ಷ್ಮ ವಲಯಗಳು, ಮೀಸಲು ಅರಣ್ಯ ವ್ಯಾಪ್ತಿಯಲ್ಲಿನ ರಸ್ತೆಗಳು, ಸರಿಯಾದ ಮಾರ್ಗ ಇಲ್ಲದಿರುವ ಕಡೆ ರಸ್ತೆ ನಿರ್ಮಾಣ ಅವರ ಆಕ್ಷೇಪಗಳಾಗಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಇದರ ಹೊರತಾಗಿಯೂ, 999 ರಸ್ತೆಗಳಿಗೆ ವಿಸ್ತೃತ ಯೋಜನಾ ವರದಿ (DPR)ಸಿದ್ಧಪಡಿಸಲಾಗಿದ್ದು, 573 ರಸ್ತೆಗಳಿಗೆ ಟೆಂಡರ್‌ಗೆ ಸಿದ್ಧವಾಗಿವೆ. ಮುಂದಿನ 1.5 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 7,110 ಕಿ.ಮೀ ರಸ್ತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

'ರಕ್ಷಿತ್ ಶೆಟ್ಟಿ - ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ: ಮಾರ್ಚ್ 28 ರಂದು RCB vs SRH

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಹಾರ್ಮುಜ್ ಜಲಸಂಧಿ ಬಳಿ ದಾಳಿ: ಭಾರತ ಕಡೆಗೆ ಹೊರಟ್ಟಿದ್ದ ಥಾಯ್ ಕಾರ್ಗೋ ಹಡಗಿನಲ್ಲಿ ಬೆಂಕಿ, ಕಪ್ಪು ಹೊಗೆ! ಹೊಣೆ ಹೊತ್ತ ಇರಾನ್

SCROLL FOR NEXT